RSS Amplifier

Blog

Karavali Times

karavalitimes.inSource feed ↗10 posts

Overdue Last read · last published · next check
Last read 10 hours ago, longer than this feed's 3 hours schedule.

Written by

Latest posts

ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದವನ ಬಂಧಿಸಿದ ಮುಲ್ಕಿ ಪೊಲೀಸರು

ಮುಲ್ಕಿ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರೋಪಿಯಿಂದ ಕಳುವಾದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ, ಮಡಿಕೇರಿ ತಾಲೂಕಿನ, ಅಯ್ಯಂಗೇರಿ ಅಂಚೆ ವ್ಯಾಪ್ತಿಯ, ಸಣ್ಣಪುಲಿಕೊಟ್ಟ ಗ್ರಾಮದ ಕುಬೇರಂಗಡಿ-ಅಜ್ಜಿಮಡ ನಿವಾಸಿ ದಿವಂಗತ ಗೋಪಾಲ ಎಂಬವರ ಪುತ್ರ ರವಿಕುಮಾರ್ ಅಲಿಯಾಸ್ ರವಿ ಎಚ್ ಜಿ (20) ಎಂದು…

ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ವ್ಯಕ್ತಿ ಪೂಂಜಾಲಕಟ್ಟೆ ಪೊಲೀಸರ ವಶಕ್ಕೆ

ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ತೇಲಾಡುತ್ತಿದ್ದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಎಂಬಲ್ಲಿ ಆಗಸ್ಟ್ 19 ರಂದು ಮಧ್ಯಾಹ್ನ ನಡೆದಿದೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ನಿವಾಸಿ ಅಬ್ದುಲ್ ಸಲೀಂ (34) ಎಂದು ಹೆಸರಿಸಲಾಗಿದೆ. ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್ಸೈ ರಾಜೇಶ್ ಕೆ ವಿ ಅವರು ಸಿಬ್ಬಂದಿಗಳೊಂದಿಗೆ…

10ನೇ ಮೈಲಿಕಲ್ಲು : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಾಯ

ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ಪುದು ಗ್ರಾಮದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಆಗಸ್ಟ್ 18 ರಂದು ಸಂಭವಿಸಿದೆ. ಗಾಯಗೊಂಡವರನ್ನು ಮಂಗಳೂರು-ಮೂಡುಶೆಡ್ಡೆ ನಿವಾಸಿ ಮೊಹಮ್ಮದ್ (62) ಎಂದು ಹೆಸರಿಸಲಾಗಿದೆ. ಇವರು ರಸ್ತೆ ದಾಟಿ ಡಿವೈಡರ್ ಬಳಿ ತಲುಪುವಷ್ಟರಲ್ಲಿ ಬಿ ಸಿ ರೋಡು ಕಡೆಯಿಂದ ಸುಬ್ರಮಣ್ಯ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ…

ಯುವ ಜನತೆಗೆ ಮತದಾನದ ಹಕ್ಕು ಒದಗಿಸಿದ ರಾಜೀವ್ ಗಾಂಧಿ ಹಾಗೂ ರೈತನಿಗೆ ಭೂಮಿಯ ಒಡೆತನ ನೀಡಿದ ದೇವರಾಜ ಅರಸು ಜನರ ಹೃದಯದಲ್ಲಿ ಅಮರ : ರೈ

ಬಂಟ್ವಾಳದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ದೇಶದಲ್ಲಿ ಯುವಜನತೆಗೆ ಮತದಾನದ ಹಕ್ಕು ಒದಗಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಉಳುವ ರೈತನಿಗೆ ಭೂಮಿಯ ಒಡೆತನ ನೀಡಿದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ನೆನಪು ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವ್ಯಾಪ್ತಿಯ…

ಮಣಿನಾಲ್ಕೂರು : ವ್ಯಾಪಾರದ ಹಣ ಸಂಗ್ರಹಿಸಿ ತೆರಳುತ್ತಿದ್ದ ವ್ಯಕ್ತಿಯ ತಡೆದು ತಲವಾರು ತೋರಿ ಎಂಟೂವರೆ ಲಕ್ಷ ಹಣ ದೋಚಿದ ನಾಲ್ವರ ತಂಡ

ಬಂಟ್ವಾಳ, ಆಗಸ್ಟ್ 20, 2026 (ಕರಾವಳಿ ಟೈಮ್ಸ್) : ವ್ಯಾಪಾರದ ಹಣ ಸಂಗ್ರಹ ಮಾಡಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಎರಡು ಬೈಕುಗಳಲ್ಲಿ ಬಂದ ನಾಲ್ವರ ತಂಡವೊಂದು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ನಗದು ಹಣ ದರೋಡೆಗೈದು ಪರಾರಿಯಾದ ಘಟನೆ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬಲ್ಲಿ ಆಗಸ್ಟ್ 20 ರಂದು ಮಟ ಮಟ ಮಧ್ಯಾಹ್ನ ವೇಳೆ ಸಂಭವಿಸಿದೆ. ಮಂಗಳೂರು ಸಮೀಪದ ಅಡ್ಯಾರ್-ಕಣ್ಣೂರು ನಿವಾಸಿ ಮಯ್ಯದ್ದಿ (40) ಎಂಬವರೇ ದರೋಡೆಗೊಳಗಾದ ವ್ಯಕ್ತಿ. ಇವರು ಕಣ್ಣೂರಿನಲ್ಲಿರುವ…

ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ಮತ್ತಿಬ್ಬರಿಗೆ ಲಾಕ್ ಹಾಕಿದ ಮಂಗಳೂರು ಪೊಲೀಸರು : ಭಾರೀ ಪ್ರಮಾಣದ ಮಾಲು ವಶಕ್ಕೆ

ಮಂಗಳೂರು, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಪ್ರಕರಣ ಬೇಧಿಸಿರುವ ಮಂಗಳೂರು ಪೊಲೀಸರು ಎಂಡಿಎಂಎ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ಆಗಸ್ಟ್ 18 ರಂದು ಮಂಗಳೂರು ಪೂರ್ವ ಪೆÇಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ, ಸುಮಾರು 30-35 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಆಟೋ ರಿಕ್ಷಾದಲ್ಲಿ ಣೀಷೇಧಿತ ಮಾದಕ ವಸ್ತುವಾದ ಎಂಡಿಎಂಎ ಹೊಂದಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಮಂಗಳೂರು…

ದ್ವಿಚಕ್ರ ವಾಹನ ಕಳವು ಪ್ರಕರಣ ಬೇಧಿಸಿ ವಾಹನ ಸಹಿತ ಆರೋಪಿ ಬಂಧಿಸಿದ ಉರ್ವ ಪೊಲೀಸರು

ಮಂಗಳೂರು, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ದ್ವಿಚಕ್ರ ವಾಹನ ಕಳ್ಳನೋರ್ವನನ್ನು ತಿಂಗಳ ಅಂತರದಲ್ಲಿ ಉರ್ವ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲ-ಕೋಡಿಯ ಬೈತುಲ್ ಕೌಸರ್ ನ್ಯೂ ತೋಟ ಹೌಸ್ ನಿವಾಸಿ ದಿವಂಗತ ಇಬ್ರಾಹಿಂ ಎಂಬವರ ಪುತ್ರ ಮುಹಮ್ಮದ್ ಫೈಝಲ್ ಯಾನೆ ತೋಟ ಫೈಝಲ್ (40) ಎಂದು ಹೆಸರಿಸಲಾಗಿದೆ. ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್ ಎಂಬಲ್ಲಿ ಮನೆಯೊಂದರ ಎದುರು ಪಾರ್ಕ್ ಮಾಡಿದ್ದ ಕೆಎ19 ಇಬಿ2226 ನೋಂದಣಿ ಸಂಖ್ಯೆಯ ಹೋಂಡಾ ಡಿಯೋ ಸ್ಕೂಟರ್…

ಬ್ರಹ್ಮರಕೂಟ್ಲು : ಮಂದಿರದ ಕಾಣಿಕೆ ಡಬ್ಬಿಯ ಹಣ ಕದಿಯುತ್ತಿದ್ದ ಅಪರಿಚಿತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಬ್ರಹ್ಮರಕೂಟ್ಲು ಶ್ರೀ ಮೂಕಾಂಬಿಕಾ ರಾಮ ಭಜನಾ ಮಂದಿರದ ಕಾಣಿಕೆ ಡಬ್ಬಿ ಅಡ್ಡ ಹಾಕಿ ಹಣ ಕದಿಯುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಆಗಸ್ಟ್ 18 ರಂದು ಸಂಭವಿಸಿದೆ. ಇಲ್ಲಿನ ರಾಮ ಭಜನಾ ಮಂದಿರಕ್ಕೆ ಆಡಳಿತ ಸಮಿತಿ ಸದಸ್ಯ ದಿನಕರ ಎಂಬವರು ಆಗಸ್ಟ್ 18 ರಂದು ಬೆಳಿಗ್ಗೆ 11.30-11.45ರ ವೇಳೆಗೆ ಸೀಯಾಳ ಇಡಲೆಂದು ತೆರಳಿದಾಗ ಅಪರಿಚಿತ ವ್ಯಕ್ತಿ ಕಾಣಿಕೆ ಡಬ್ಬಿಯನ್ನು ಅಡ್ಡ ಹಾಕಿ ಅದರಲ್ಲಿದ್ದ ಹಣ…

ಕರಿಯಂಗಳ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಳಿ ಅವಿವಾಹಿತ ಮೃತದೇಹ ಪತ್ತೆ

ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಕರಿಯಂಗಳ ಗ್ರಾಮದ ತಂತ್ರಿಬೆಟ್ಟು ಬಳಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಳಿ ವ್ಯಕ್ತಿಯೋರ್ವರ ಮೃತದೇಹ ಸಂಶಯಾಸ್ಪದವಾಗಿ ಪತ್ತೆಯಾದ ಘಟನೆ ಆಗಸ್ಟ್ 17 ರಂದು ಸಂಭವಿಸಿದೆ. ಮೃತರ ಇಲ್ಲಿನ ನಿವಾಸಿ ಹರೀಶ್ ಟಿ (38) ಎಂದು ಹೆಸರಿಸಲಾಗಿದೆ. ಇವರು ಅವಿವಾಹಿತರಾಗಿದ್ದು, ಇಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿರುವುದಾಗಿದೆ. ಆಗಸ್ಟ್ 16 ರಂದು ಕೆಲಸಕ್ಕೆ ಹೋಗಿ ಬಂದು ರಾತ್ರಿ ಮಲಗಿದ್ದ ಇವರು ಬೆಳಗ್ಗೆ ನೋಡುವಾಗ ಮನೆಯಲ್ಲಿರಲಿಲ್ಲ. ಬೆಳಿಗ್ಗೆ…

ಬಡಗಬೆಳ್ಳೂರು : ಮನೆಯಂಗಳದಲ್ಲಿ ಕುಸಿದು ಬಿದ್ದು ಯುವತಿ ಮೃತ್ಯು

ಬಂಟ್ವಾಳ, ಆಗಸ್ಟ್ 19, 2026 (ಕರಾವಳಿ ಟೈಮ್ಸ್) : ಉಸಿರಾಟಕ್ಕೆ ತೊಂದರೆಯಾಗುತ್ತಿದೆ ಎಂದು ಮನೆಯಂಗಳದಲ್ಲಿ ಕುಸಿದು ಬಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಡಗಬೆಳ್ಳೂರು ಗ್ರಾಮದ ಗುಂಡಾಲ ಎಂಬಲ್ಲಿ ಆಗಸ್ಟ್ 16 ರಂದು ಸಂಭವಿಸಿದೆ. ಮೃತ ಯುವತಿಯನ್ನು ಶ್ರೀಮತಿ ಶೋಭಾ ಜಿ ಎನ್ (31) ಎಂದು ಹೆಸರಿಸಲಾಗಿದೆ. ಈಕೆ ತನ್ನ ಅಣ್ಣ ಶಶಿಕುಮಾರ್ ಅವರ ಮನೆಗೆ ದೈವದ ಕಾರ್ಯಕ್ರಮಕ್ಕೆಂದು ಬಂದಿದ್ದು, ಆಗಸ್ಟ್ 16 ರಂದು ಮನೆಯಲ್ಲಿ ದೈವಗಳ ಕಾರ್ಯಕ್ರಮ ಪ್ರಾರಂಭವಾಗಿರುವ ಸಮಯ ಉಸಿರಾಡಲು…