RSS Amplifier

News First Live - News First is a Pioneering 24x7 Kannada News Channel : Latest Posts · Aug 29, 2026

ನಾಗೇಂದ್ರ ರಾಜೀನಾಮೆ ‘ಕರ್ಮದ ಫಲ’: ಜನಾರ್ದನ ರೆಡ್ಡಿ ವಾಗ್ದಾಳಿ

0
Sign in to vote or save

Digital Desk · News First Live - News First is a Pioneering 24x7 Kannada News Channel

ನಾಗೇಂದ್ರ ರಾಜೀನಾಮೆ ‘ಕರ್ಮದ ಫಲ’: ಜನಾರ್ದನ ರೆಡ್ಡಿ ವಾಗ್ದಾಳಿ

ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಅವರು, ನಾಗೇಂದ್ರ ಅವರ ರಾಜೀನಾಮೆ ‘ಕರ್ಮದ ಫಲ’ ಎಂದು ಹೇಳಿದ್ದಾರೆ.

author-image

janardhan reddy (1)

ಬಳ್ಳಾರಿ: ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಅವರು, ನಾಗೇಂದ್ರ ಅವರ ರಾಜೀನಾಮೆ ‘ಕರ್ಮದ ಫಲ’ ಎಂದು ಹೇಳಿದ್ದಾರೆ.

‘ಕರ್ಮದ ಫಲದಿಂದ ನಾಗೇಂದ್ರ ರಾಜೀನಾಮೆ’

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಾಗೇಂದ್ರ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದ ಜನಾರ್ದನ ರೆಡ್ಡಿ, ಇದೀಗ ಅವರ ರಾಜೀನಾಮೆ ಕರ್ಮದ ಫಲ ಎಂದು ಟೀಕಿಸಿದ್ದಾರೆ. ನಿಗಮದ ಹಣ ಅಕ್ರಮವಾಗಿ ಬೇರೆಡೆಗೆ ಹೋಗಿರುವ ಬಗ್ಗೆ ಹಲವು ಪ್ರಶ್ನೆಗಳಿವೆ. ಹಣ ಎಲ್ಲಿಗೆ ಹೋಯಿತು, ಯಾರ ಮೂಲಕ ವರ್ಗಾವಣೆಯಾಯಿತು ಎಂಬುದಕ್ಕೆ ನಾಗೇಂದ್ರ ಸ್ಪಷ್ಟನೆ ನೀಡಬೇಕು ಎಂದು ರೆಡ್ಡಿ ಒತ್ತಾಯಿಸಿದ್ದಾರೆ.

‘ಕಾಂಗ್ರೆಸ್ ಶಾಸಕರು, ಸಂಸದರು ರಾಜೀನಾಮೆ ನೀಡಲಿ’

ಅಖಂಡ ಬಳ್ಳಾರಿ ಜಿಲ್ಲೆಯಲ್ಲಿರುವ ಕಾಂಗ್ರೆಸ್ ಶಾಸಕರು ಹಾಗೂ ಸಂಸದರು ರಾಜೀನಾಮೆ ನೀಡಲಿ ಎಂದು ಜನಾರ್ದನ ರೆಡ್ಡಿ ಸವಾಲು ಹಾಕಿದ್ದಾರೆ.

ನಾಳೆಯೇ ಚುನಾವಣೆ ನಡೆದರೂ ನಾವು ಸಿದ್ಧ

ನಾಗೇಂದ್ರ ಅವರು ಬಿಜೆಪಿ ನಾಯಕರನ್ನು ‘ಚಲಾವಣೆಯಿಲ್ಲದ ನಾಣ್ಯಗಳು’ ಎಂದು ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿದ ರೆಡ್ಡಿ, ತಮ್ಮ ಸಾಮರ್ಥ್ಯವನ್ನು ಚುನಾವಣೆಯಲ್ಲಿ ತೋರಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 6 ದಿನಗಳ ನೇಪಾಳ ಪ್ರವಾಸ ಯಶಸ್ವಿ: ಜಲಪ್ರಳಯದ ನಡುವೆಯೂ ಹಾವೇರಿಯ 12 ಮಂದಿ ಸುರಕ್ಷಿತ

‘ನಿಗಮದ ಹಣ ಬಾಂಬೆಗೂ ಹೋಗಿದೆ’

ವಾಲ್ಮೀಕಿ ನಿಗಮದ ಹಣ ಬಾಂಬೆಗೂ ಹೋಗಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ಈ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ನಾಗೇಂದ್ರ ಅವರ ಆತ್ಮೀಯರು ಎಂದು ಹೇಳಲಾಗುತ್ತಿದೆ. ಅವರು ಯಾರು? ನಿಗಮದ ಹಣ ಯಾಕೆ ಹೋಯ್ತು? ನಾಗೇಂದ್ರ ಅವರೇ ಹೇಳಲಿ, ಎಂದು ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.

ಬಿಜೆಪಿ ಪಾದಯಾತ್ರೆ ಮುಂದುವರಿಕೆ

ನಾಗೇಂದ್ರ ರಾಜೀನಾಮೆ ನೀಡಿರುವುದರಿಂದ ಬಿಜೆಪಿ ತನ್ನ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಬಿಜೆಪಿ ಪಾದಯಾತ್ರೆಯ ಒಂದು ಭಾಗವಾಗಿತ್ತು. ಆದರೆ ರಾಜ್ಯದ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

‘ರಾಜ್ಯದ ಸಮಸ್ಯೆಗಳಿಗಾಗಿ ಪಾದಯಾತ್ರೆ’

ರಾಜ್ಯದಲ್ಲಿ ಜನರನ್ನು ಕಾಡುತ್ತಿರುವ ಹಲವು ಪ್ರಮುಖ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ನಡೆಸಲಿದೆ. ಸರ್ಕಾರದ ವಿರುದ್ಧ ಜನರ ಧ್ವನಿಯಾಗುವ ಉದ್ದೇಶದಿಂದ ಹೋರಾಟ ಮುಂದುವರಿಸುವುದಾಗಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ನಾಗೇಂದ್ರ ವಿರುದ್ಧ 35 ಕೇಸ್? ‘ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು’ ಎಂದ ಆರ್. ಅಶೋಕ್

ವಿಶೇಷ ಸೂಚನೆ : ಎಲ್ಲಾ DTH  & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​ ಲಭ್ಯ

Read the original on newsfirstlive.com

Comments

Nothing yet. Say the first thing.

    Sign in to join the conversation.