RSS Amplifier

News source

Nikhara News | Kannada News Website

Kannada News Website

nikharanews.inSource feed ↗27 articles

Overdue Last read · last published · next check
Last read 5 hours ago, longer than this feed's 2 hours schedule.

Latest articles

ಮಂಗಳೂರನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್‌ ವಿಭಾಗದಿಂದ ಬೇರ್ಪಡಿಸಿ ಮೈಸೂರು ವಿಭಾಗ: ಕೇಂದ್ರ  ಸಚಿವರಿಗೆ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಕೃತಜ್ಞತೆ

ಪುತ್ತೂರು: ಮಂಗಳೂರು–ಕಬಕ–ಪುತ್ತೂರು–ಬೆಂಗಳೂರು ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದೆ. ಮಂಗಳೂರು–ಕಬಕ–ಪುತ್ತೂರು–ಬೆಂಗಳೂರು ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದರೂ, ಅಧಿಕಾರ ವಹಿಸಿಕೊಂಡ ಬಳಿಕ ಕಡಿಮೆ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿರುವುದಕ್ಕೆ ಸಂಘವು ಸಚಿವರನ್ನು…

ಪುತ್ತೂರು :  ಲ್ಯಾಮಿನೇಷನ್‌ ಗೆ ತಂದ ದಾಖಲೆ  ಸುಟ್ಟು ಹೋದ  ವಿಚಾರ:  ಅಂಗಡಿ ಮಾಲೀಕರು–ಗ್ರಾಹಕಿಯರ  ನಡುವೆ ವಾಗ್ವಾದ, ಹಲ್ಲೆ – ದೂರು , ಪ್ರತಿ ದೂರು ದಾಖಲು

ಪುತ್ತೂರು: ದಾಖಲಾತಿಯೊಂದು ತಾಂತ್ರಿಕ ದೋಷದಿಂದ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿ ಅಂಗಡಿ ಮಾಲೀಕರು ಹಾಗೂ ಗ್ರಾಹಕರ ನಡುವೆ ವಾಗ್ವಾದ ನಡೆದು, ಬಳಿಕ ಪರಸ್ಪರ ಹಲ್ಲೆ ನಡೆದ ಘಟನೆ ಶುಕ್ರವಾರ ಮಧ್ಯಾಹ್ನ ಪುತ್ತೂರು ದರ್ಭೆಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಮಂಡೆಕೋಲು ನಿವಾಸಿಗಳಾದ ಮುಬಾಶಿರ, ಫಾತೀಮಾ ಹಾಗೂ ಮುಬಾಶಿರ್ ಅವರು ದರ್ಭೆಯಲ್ಲಿರುವ ಅಂಜನಾ ಪೈ ಅವರ ‘ಡ್ರೀಮ್ ಡೆಸ್ಟಿನೇಷನ್ ಡಿಜಿಟಲ್ ಸೇವಾ ಕೇಂದ್ರ’ಕ್ಕೆ ತೆರಳಿ ಕೆಲವು ದಾಖಲಾತಿಗಳನ್ನು ಝೆರಾಕ್ಸ್ ಹಾಗೂ ಲ್ಯಾಮಿನೇಷನ್ ಮಾಡಿಸಲು…

ಪುತ್ತೂರು ದರ್ಭೆಯಲ್ಲಿ ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ; ಪರಿಸ್ಥಿತಿ ನಿಯಂತ್ರಿಸಲು ಲಾಠಿ ಬೀಸಿದ ಪೊಲೀಸರು

ಪುತ್ತೂರು: ಯಾವುದೋ ವಿಚಾರಕ್ಕೆ ಅಂಗಡಿಯಾತ ಹಾಗೂ ಗ್ರಾಹಕಿ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ವಿಕೋಪಕ್ಕೆ ತೆರಳಿ ಇತ್ತಂಡದವರು ಗುಂಪು ಸೇರಿದ ಪರಿಣಾಮ ಕೆಲಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾದ ಘಟನೆ ಶುಕ್ರವಾರ ಸಂಜೆ ದರ್ಭೆ ಜಂಕ್ಷನ್‌ನಲ್ಲಿ ನಡೆದಿದೆ. ದರ್ಭೆ ಜಂಕ್ಷನ್‌ನಲ್ಲಿರುವ ಜೆರಾಕ್ಸ್ ಅಂಗಡಿಗೆ ಮಹಿಳೆಯೊಬ್ಬರು ಗ್ರಾಹಕಿಯಾಗಿ ಬಂದಿದ್ದರು. ಈ ವೇಳೆ ಯಾವುದೋ ವಿಚಾರಕ್ಕೆ ಅಂಗಡಿಯಾತ ಹಾಗೂ ಗ್ರಾಹಕಿ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಳಿಕ ವಿಚಾರ ತಿಳಿದು ಎರಡೂ…

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಂಸ್ಥಾಪಕರು,ವ್ಯವಸ್ಥಾಪಕ ಟ್ರಸ್ಟಿ ಹಾಗೂ ವಿವೇಕಾನಂದ ತಾಂತ್ರಿಕ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ|ಶ್ರೀಶ ಭಟ್ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಕೃತಕ ಬುದ್ಧಿಮತ್ತೆ ವೇಗವಾಗಿ ಬೆಳೆಯುತ್ತಿರುವ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಅದಕ್ಕೆ ಹೊಂದಿಕೊಳ್ಳುವುದರ ಜೊತೆಗೆ ತಮ್ಮದೇ ಆದ ಸೃಜನಶೀಲತೆ, ಕೌಶಲ್ಯ,…

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ‘ಭಾವನಾತ್ಮಕ ಸ್ವಾಸ್ಥ್ಯ’ ಕುರಿತು ಕಾರ್ಯಗಾರ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ”ಭಾವನಾತ್ಮಕ ಸ್ವಾಸ್ಥ್ಯ” ಕುರಿತು ಕಾರ್ಯಗಾರವು ಆ 20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ”ಭಾವನಾತ್ಮಕ ಸ್ವಾಸ್ಥ್ಯ” ಕುರಿತು ಕಾರ್ಯಗಾರವು ಆ 20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ವಿವೇಕಾನಂದ ಕಾಲೇಜು…

Vivekananda-ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಪುತ್ತೂರು ಇಲ್ಲಿನ ವಿಜ್ಞಾನ ಸಂಘ ಮತ್ತು ಐ.ಕ್ಯೂ.ಎ.ಸಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟಿಸಿ ಉಜಿರೆ ಎಸ್.ಡಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ.ಟಿ.ಪ್ರಕಾಶ್ ಪ್ರಭು ಮಾತನಾಡಿದರು. ಪುತ್ತೂರು, ಆ,20: ಗಣಿತವು ಕಠಿಣ ವಿಷಯವೆಂದು ಹಲವರು ಭಾವಿಸುತ್ತಾರೆ. ವಿದ್ಯಾರ್ಥಿಗಳಲ್ಲಿ ತರ್ಕಬದ್ಧ ಚಿಂತನೆ…

Venuru-ವೇಣೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ರಿಕ್ಷಾ ಚಾಲಕನ ಬಂಧನ

ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದಡಿ ವೇಣೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಆರೋಪಿ. ವೇಣೂರು: ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದಡಿ ವೇಣೂರು ಪೊಲೀಸರು…

Bantwal-ಬಂಟ್ವಾಳ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಪೊಲೀಸ್‌ ವಶ

ಶಾಲಾ ಬಾಲಕಿಯೊಬ್ಬಳನ್ನು ನಿರಂತರವಾಗಿ ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಮಧ್ಯವಯಸ್ಕ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಟ್ವಾಳದ ಸರಪಾಡಿ ನಿವಾಸಿ ಜಯಂತ್ (47) ಬಂಧಿತ ಆರೋಪಿ. ಬಂಟ್ವಾಳ: ಶಾಲಾ ಬಾಲಕಿಯೊಬ್ಬಳನ್ನು ನಿರಂತರವಾಗಿ ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಮಧ್ಯವಯಸ್ಕ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಟ್ವಾಳದ ಸರಪಾಡಿ ನಿವಾಸಿ ಜಯಂತ್ (47) ಬಂಧಿತ…

Mangalore:-ಮಂಗಳೂರು: ವಿಮಾನ ಮತ್ತು ವಂದೇಭಾರತ್ ರೈಲಿಗೆ ಆಹಾರ ಸರಬರಾಜು ಮಾಡುವ ಕ್ಯಾಟರಿಂಗ್ ಸಂಸ್ಥೆಗೆ ಇಲಾಖೆ ದಾಳಿ – ಆಹಾರ ತಯಾರಿಸುವ ಸ್ಥಳದಲ್ಲಿ ಭಾರಿ ಅವ್ಯವಸ್ಥೆ ಪತ್ತೆ

ಮಂಗಳೂರು ನಗರದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇಂದು ರೈಲ್ವೆ ಮತ್ತು ವಿಮಾನಗಳಿಗೆ ಆಹಾರ ಪೂರೈಸುವ ಪ್ರಮುಖ ಕ್ಯಾಟರಿಂಗ್ ಕೇಂದ್ರಗಳ ಮೇಲೆ ಮಿಂಚಿನ ದಾಳಿ ನಡೆಸಿದ್ದಾರೆ. ಮಂಗಳೂರು: ನಗರದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇಂದು ರೈಲ್ವೆ ಮತ್ತು ವಿಮಾನಗಳಿಗೆ ಆಹಾರ ಪೂರೈಸುವ ಪ್ರಮುಖ ಕ್ಯಾಟರಿಂಗ್ ಕೇಂದ್ರಗಳ ಮೇಲೆ ಮಿಂಚಿನ ದಾಳಿ…

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ.ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಈ ಅನುನೋದನೆ ದೊರೆಯುವದರೊಂದಿಗೆ ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕ್ರಿಯೆ ಮತ್ತಷ್ಟು ಚುರುಕುಗೊಳ್ಳಲಿದೆ. ಆಡಳಿತಾತ್ಮಕ ಅನುಮೋದನೆ ಕೋರಿ ಕಳೆದ ವಾರ ಶಾಸಕ ಅಶೋಕ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಇಂದು ಮುಖ್ಯಮಂತ್ರಿಗಳು ಈ ಅನುಮೋದನೆ…

Akshaya Career Academy-ಪುತ್ತೂರು: ‘ಅಕ್ಷಯ ಕೆರಿಯರ್ ಅಕಾಡೆಮಿ’ ಉದ್ಘಾಟನಾ ಸಮಾರಂಭ : 18 ರಿಂದ 1000 ವಿದ್ಯಾರ್ಥಿಗಳತ್ತ ಅಕ್ಷಯದ ಪಯಣ

ತಂತ್ರಜ್ಞಾನದ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳ ಉದ್ಯೋಗದ ಅವಶ್ಯಕತೆಗಳನ್ನು ಮನಗಂಡು, ಪುತ್ತೂರಿನಂತಹ ಗ್ರಾಮೀಣ ಭಾಗದಲ್ಲಿ ವೃತ್ತಿಪರ ಕೋರ್ಸ್‌ಗಳನ್ನು ಪರಿಚಯಿಸುತ್ತಿರುವ ಅಕ್ಷಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಪಿ. ಶಿವಾನಂದ ಹೇಳಿದರು. ದರ್ಬೆ ಜಂಕ್ಷನ್‌ನ ವಿಶ್ಲೇಶ್ ಕಾಂಪ್ಲೆಕ್ಸ್‌ನಲ್ಲಿ ನಡೆದ ‘ಅಕ್ಷಯ ಕೆರಿಯರ್ ಅಕಾಡೆಮಿ’ಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪುತ್ತೂರು: ತಂತ್ರಜ್ಞಾನದ ಇಂದಿನ…

Suicide-ಡೆತ್‌ನೋಟ್ ಬರೆದಿಟ್ಟು ನೀಟ್ (NEET) ಆಕಾಂಕ್ಷಿ ಆತ್ಮಹತ್ಯೆ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. “ನಾನು ಮುಂದಿನ ಜನ್ಮದಲ್ಲಿ ಖಂಡಿತ ವೈದ್ಯನಾಗುತ್ತೇನೆ” ಎಂದು ಡೆತ್‌ನೋಟ್ ಬರೆದಿಟ್ಟು 19 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. “ನಾನು ಮುಂದಿನ ಜನ್ಮದಲ್ಲಿ ಖಂಡಿತ ವೈದ್ಯನಾಗುತ್ತೇನೆ” ಎಂದು ಡೆತ್‌ನೋಟ್ ಬರೆದಿಟ್ಟು 19 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬರು ಆತ್ಮಹತ್ಯೆ…

Supreme Court-NEET ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

NEET ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸಿದ್ದಾರೆಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಐವರು ತಜ್ಞರನ್ನೊಳಗೊಂಡ ಉನ್ನತಾಧಿಕಾರದ ಸಮಿತಿ (HPEC) ರಚಿಸಿದೆ. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮುಖ್ಯಸ್ಥರಾಗಿದ್ದಾರೆ. ಹೊಸದಿಲ್ಲಿ, ಆ. 20: NEET ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ…

Bihar-ಸರ್ಕಾರಿ ಯೋಜನೆಯ ವಿಡಿಯೋಗೆ 1ಲಕ್ಷ ವ್ಯೂವ್ಸ್ ಗೆ ರೂ.10000..! ಇನ್ಫ್ಲೂಯೆನ್ಸರ್ ಗಳಿಗೆ ಬಂಪರ್ ಆಫರ್ ಕೊಟ್ಟ ಬಿಹಾರ ಸರ್ಕಾರ

ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಂಪ್ರದಾಯಿಕ ಮಾಧ್ಯಮಗಳಿಗಿಂತ ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚಾಗುತ್ತಿದೆ. ಇದನ್ನು ಮನಗಂಡಿರುವ ಬಿಹಾರ ಸರ್ಕಾರವು, ತನ್ನ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ (Social Media Influencers) ಗಳ ಮೊರೆ ಹೋಗಿದೆ. ಇದಕ್ಕಾಗಿ ಸರ್ಕಾರವು ವಿಶೇಷ ಜಾಹೀರಾತು ನೀತಿಯನ್ನು ಜಾರಿಗೊಳಿಸಿದ್ದು, ಕಂಟೆಂಟ್ ಕ್ರಿಯೇಟರ್‌ಗಳು ಒಂದು ವಿಡಿಯೋಗೆ ಗರಿಷ್ಠ 1 ಲಕ್ಷ ರೂಪಾಯಿವರೆಗೆ ಹಣ ಗಳಿಸಬಹುದಾಗಿದೆ. ನವದೆಹಲಿ/ಪಟ್ನಾ:…

Chitradurga-ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಖಾಸಗಿ ಬಸ್: ಮೂವರು ದಾರುಣ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ (ಆ.21) ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್‌ ಚಾಲಕ, ನಿರ್ವಾಹಕ ಹಾಗೂ ಓರ್ವ ನರ್ಸಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ (ಆ.21) ಬೆಳಗಿನ ಜಾವ…

Puttur-ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ

ಹತ್ತು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪುತ್ತೂರು: ಹತ್ತು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ:2020ರ…

Puttur-HEF ಪುತ್ತೂರು ಘಟಕದಿಂದ ಗ್ರಾಮಜನ್ಯ ಜೇನು ಸಂಸ್ಕರಣಾ ಘಟಕಕ್ಕೆ ಭೇಟಿ

HEF ಪುತ್ತೂರು ಘಟಕದ ಘಟನಾಯಕರು ಹಾಗೂ ಸದಸ್ಯರ ತಂಡವು ಆಗಸ್ಟ್ 19ರಂದು ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರಿನಲ್ಲಿರುವ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿತು. HEF ಪುತ್ತೂರು ಘಟಕದ ಘಟನಾಯಕರು ಹಾಗೂ ಸದಸ್ಯರ ತಂಡವು ಆಗಸ್ಟ್ 19ರಂದು ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರಿನಲ್ಲಿರುವ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿತು. HEF ಸಂಸ್ಥೆಯ ಕೈಗಾರಿಕಾ ಭೇಟಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಈ ಭೇಟಿಯಲ್ಲಿ…

Vivekananda-ವಿವೇಕಾನಂದ ಕಾಲೇಜಿನಲ್ಲಿ ಬ್ಲಾಗ್ ಉದ್ಘಾಟನೆ

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲದ ಆಂಗ್ಲ ವಿಭಾಗ, ಲಿಟರರಿ ಕ್ಲಬ್ ಮತ್ತು ಐ.ಕ್ಯೂ.ಎ.ಸಿ ಘಟಕದ ಜಂಟಿ ಆಶ್ರಯದಲ್ಲಿ ‘ಫ್ರಮ್ ಪೇಜಸ್ ಟು ಪಿಕ್ಸೆಲ್ಸ್’ ಕಾರ್ಯಕ್ರಮ ನಡೆಯಿತು. ಕಾಯಕ್ರಮದಲ್ಲಿ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಶ್ರೀಹರಿ ಶರ್ಮ ನಿರ್ಮಿಸಿದ ನೂತನ ಬ್ಲಾಗ್ ಉದ್ಘಾಟಿಸಿಲಾಯಿತು. ಪುತ್ತೂರು, ಆ,19: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲದ ಆಂಗ್ಲ ವಿಭಾಗ, ಲಿಟರರಿ ಕ್ಲಬ್ ಮತ್ತು ಐ.ಕ್ಯೂ.ಎ.ಸಿ ಘಟಕದ ಜಂಟಿ…

‘ಋಣಮುಕ್ತಿ ಮತ್ತು ಅಮೃತತ್ವದೆಡೆಗೆ’ ಕೃತಿ ಬಿಡುಗಡೆ

ಪುತ್ತೂರು.ಆ,೨೦ : ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸಂಶೋಧನ ಕೇಂದ್ರ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಸೌರಭ ಪ್ರಸಾರಾಂಗ ಮತ್ತು ಐಕ್ಯೂಎಸಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಾಲಯ ಬೆಟ್ಟಂಪಾಡಿ ಇದರ ಸಹಯೋಗದಲ್ಲಿ ಡಾ.ಡಿ.ಸದಾಶಿವ ಭಟ್ಟ ಪಳ್ಳುಮನೆ ನಿಡಳ್ಳಿ ಇವರ ಕೃತಿ ‘ಋಣಮುಕ್ತಿ ಮತ್ತು ಅಮೃತತ್ವದೆಡೆಗೆ ಗೀತ ರೂಪಕಗಳು’ ಕೃತಿ ಬಿಡುಗಡೆ ಸಮಾರಂಭ ಆಗಸ್ಟ್ 22ರ ಶನಿವಾರದಂದು ಬೆಟ್ಟಂಪಾಡಿಯ ಶ್ರೀ ಮಹಾಲಿಂಗೇಶ್ವರ ದೇವಾಲಯದ…

Dharmasthala-ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ

ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 14,278 ಕೆ.ಜಿ., ಪಡಿಕಾಳು: 2855 ಕೆ.ಜಿ., ಮೆಣಸು: 1142ಕೆ.ಜಿ., ಉಪ್ಪು: 2855…

Alvas-16ನೇ ‘ಆಳ್ವಾಸ್ ಪ್ರಗತಿ’ ಯಶಸ್ವಿ: 2,416 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ, 6,183 ಮಂದಿ ಶಾರ್ಟ್‌ಲಿಸ್ಟ್..!

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್‌ ಪ್ರಗತಿ’ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಮೇಳದಲ್ಲಿ ಒಟ್ಟು 2,416 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗದ ಆಫರ್ ಪತ್ರ ಪಡೆದುಕೊಂಡಿದ್ದು, 6,183 ಅಭ್ಯರ್ಥಿಗಳು ವಿವಿಧ ಹಂತದ ನೇಮಕಾತಿ ಪ್ರಕ್ರಿಯೆಗಳಿಗೆ ಆಯ್ಕೆಯಾಗಿದ್ದಾರೆ (ಶಾರ್ಟ್‌ಲಿಸ್ಟ್) ಎಂದು ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ. ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 16ನೇ…

Private bus-ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ. ಬಸ್ಸಿನಲ್ಲಿದ್ದ ಏಳು ಮಂದಿ…

DK Shivakumar-ಬಿಜೆಪಿ ಕಚೇರಿಗೆ ಆಗಮಿಸಿ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಡಿಕೆಶಿ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಮಂಗಳವಾರ ರಾತ್ರಿ…

Vitla:-ವಿಟ್ಲ: ಶಿಲ್ಪ ಶ್ರೀ ಯುವಕ ಮಂಡಲದ ಸ್ಥಾಪಕ ಕಾರ್ಯದರ್ಶಿ ದಿ. ರಘುನಾಥ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

ಕೊಡಂಗಾಯಿಯ ಶಿಲ್ಪ ಶ್ರೀಯುವಕ ಮಂಡಲದ (ರಿ) ವತಿಯಿಂದ, ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿದ್ದ ದಿವಂಗತ ರಘುನಾಥ ಶೆಟ್ಟಿ ಅವರಿಗೆ ಇತ್ತೀಚೆಗೆ ಕೊಡಂಗಾಯಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ವಿಟ್ಲ: ಕೊಡಂಗಾಯಿಯ ಶಿಲ್ಪ ಶ್ರೀಯುವಕ ಮಂಡಲದ (ರಿ) ವತಿಯಿಂದ, ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿದ್ದ ದಿವಂಗತ ರಘುನಾಥ ಶೆಟ್ಟಿ ಅವರಿಗೆ ಇತ್ತೀಚೆಗೆ ಕೊಡಂಗಾಯಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಸಂಘದ ಸ್ಥಾಪಕ ಸದಸ್ಯರು,…

G.L. Acharya Jewellers-ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವರಮಹಾಲಕ್ಷ್ಮೀ ವಿಶೇಷ ಮಾರಾಟ ಮೇಳ – ಚಿನ್ನ, ಬೆಳ್ಳಿ, ವಜ್ರಕ್ಕೆ ಸ್ಪೆಷಲ್ ಡಿಸ್ಕೌಂಟ್

ಪುತ್ತೂರು ನಗರದ ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್‌ಗಳು ಆಗಸ್ಟ್ 15ರಿಂದ 23ರವರೆಗೆ ನಡೆಯುತ್ತಿರುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಸಂಸ್ಥೆಯು 1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ ಮೂಲಕ ಗ್ರಾಹಕರ ಮೆಚ್ಚುಗೆಗಳಿಸಿಕೊಂಡಿದೆ. ಪುತ್ತೂರು: ನಗರದ ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್…

Patte-ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಗಮಕವಾಚನ

ಆ.19, ಬುಧವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಒಂಬತ್ತನೆಯ ಮತ್ತು ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಧಾರಿತ ಗಮಕ ವಾಚನ ಕಾರ್ಯಕ್ರಮ ನಡೆಯಿತು. ಪಟ್ಟೆ ಬಡಗನ್ನೂರು: ಆ.19, ಬುಧವಾರದಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಒಂಬತ್ತನೆಯ ಮತ್ತು ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಧಾರಿತ ಗಮಕ ವಾಚನ ಕಾರ್ಯಕ್ರಮ ನಡೆಯಿತು. ಗಮಕಿಯಾಗಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಚಂದ್ರಶೇಖರ್ ಸುಳ್ಯ ಪದವು, ವ್ಯಾಖ್ಯಾನಕಾರ ರಾಗಿ ಅಪ್ಪಕುಂಞಿ…

PM CARES-ಪಿಎಂ ಕೇರ್ಸ್ ನಿಧಿಯ ಆಡಿಟ್ ವರದಿ ಬಹಿರಂಗ: ಸಂಗ್ರಹವಾಗಿದ್ದು 8452 ಕೋಟಿ, 24-25ರಲ್ಲಿ ಖರ್ಚಾಗಿದ್ದು ಕೇವಲ 27 ಲಕ್ಷ..!

ತುರ್ತು ಪರಿಸ್ಥಿತಿಗಳಲ್ಲಿ ದೇಶದ ನಾಗರಿಕರಿಗೆ ನೆರವು ನೀಡುವ ಉದ್ದೇಶದಿಂದ ಸ್ಥಾಪಿಸಲಾದ ‘ಪಿಎಂ ಕೇರ್ಸ್’ (PM CARES) ನಿಧಿಯ ಕಳೆದ ಎರಡು ವರ್ಷಗಳ ಆಡಿಟ್ ವರದಿ ಹೊರಬಿದ್ದಿದೆ. ಈ ವರದಿಯ ಪ್ರಕಾರ, ನಿಧಿಗೆ ಹರಿದು ಬರುತ್ತಿರುವ ದೇಣಿಗೆಗೆ ಹೋಲಿಸಿದರೆ, ಅದರಿಂದ ಖರ್ಚು ಮಾಡುತ್ತಿರುವ ಮೊತ್ತ ತೀರಾ ಕಡಿಮೆ ಇರುವುದು ಕಂಡುಬಂದಿದೆ. ನವದೆಹಲಿ: ತುರ್ತು ಪರಿಸ್ಥಿತಿಗಳಲ್ಲಿ ದೇಶದ ನಾಗರಿಕರಿಗೆ ನೆರವು ನೀಡುವ ಉದ್ದೇಶದಿಂದ ಸ್ಥಾಪಿಸಲಾದ ‘ಪಿಎಂ ಕೇರ್ಸ್’ (PM CARES) ನಿಧಿಯ ಕಳೆದ ಎರಡು ವರ್ಷಗಳ…