ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಆದರೆ ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆ ಎಂಬಲ್ಲಿ ಕಾಡಾನೆಗಳನ್ನು ಕಾಡಿಗೆ ಓಡಿಸುವ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕಾರಣದಿಂದ ಶಾಲೆಗಳಿಗೆ ಘೋಷಿಸಲಾಗಿದ್ದ ರಜಾ ದಿನಗಳ ಕೊರತೆಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾರ್ಗಸೂಚಿ ಹೊರಡಿಸಿದೆ. ನಷ್ಟವಾಗಿರುವ ಬೋಧನಾ ಅವಧಿಯನ್ನು ಸರಿದೂಗಿಸಲು ಸೆಪ್ಟೆಂಬರ್ 2ನೇ ವಾರದಿಂದಲೇ ಜಾರಿಗೆ ಬರುವಂತೆ ಶನಿವಾರ ಅಪರಾಹ್ನ ಪೂರ್ಣಾವಧಿ ಹಾಗೂ ಇತರ ದಿನಗಳ ಸಂಜೆ ಹೆಚ್ಚುವರಿ ತರಗತಿ ನಡೆಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಡಳಿತ…
ದಾವಣಗೆರೆ: ಷೇರು ಮಾರುಕಟ್ಟೆ ನಷ್ಟದಿಂದಾಗಿ ಸಾಲ ತೀರಿಸಲಾಗದೆ ಒಂದೇ ಕುಟುಂಬದ ನಾಲ್ವರು ಪತ್ರ ಬರೆದಿಟ್ಟು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಶಾಗಲೆ ಗ್ರಾಮದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ಈ ನಾಲ್ವರು ನಾಪತ್ತೆಯಾದವರು ಎಂದು ತಿಳಿದು ಬಂದಿದೆ. ಇವರು ಹಲವು ದಿನಗಳಿಂದ ಕುಟುಂಬದ ಯಾರ ಸಂಪರ್ಕಕ್ಕೂ ಸಿಗದಿರುವುದು ಆತಂಕಕ್ಕೆ ಕಾರಣವಾಗಿದ್ದು…
ಕುಂದಾಪುರ : ಉಡುಪಿ ಜಿಲ್ಲೆಯ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸುವ ಮೂಲಕ ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಪ್ರದತ್ತವಾದ…
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ತೀವ್ರವಾಗಿ ಖಂಡಿಸುತ್ತದೆ. ವರದಿಗಾರ ಶ್ರೀಕಾಂತ್ ಹೆಮ್ಮಾಡಿಯವರು ಕಳೆದ ಕೆಲವು ದಿನಗಳ ಹಿಂದೆ ಕನ್ನಡಪ್ರಭ ಪತ್ರಿಕೆಯಲ್ಲಿ ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಸರ್ಜನ್ ಅವರ ಭ್ರಷ್ಟಾಚಾರ ಆರೋಪ ವರದಿಯನ್ನು ಮಾಡಿರುತ್ತಾರೆ. ಸದ್ರಿ ವರದಿ ಪ್ರಕಟವಾದ ಬಳಿಕ ಸರ್ಜನ್ ವೈದ್ಯರಾದ ಮಹೇಂದ್ರ ಶೆಟ್ಟಿ ಸೋಶಿಯಲ್…
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಸಮೀಪ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರವೆಸಗಿದ ಆರೋಪದಡಿ ಸ್ಕೂಲ್ ಟ್ರಿಪ್ ಆಟೊರಿಕ್ಷಾ ಚಾಲಕನನ್ನು ವೇಣೂರು ಠಾಣೆ ಪೊಲೀಸರು ಬಂಧಿಸಿ ಮಂಗಳೂರು ಕಾರಾಗೃಹಕ್ಕೆ ಒಪ್ಪಿಸಿದ್ದಾರೆ. ವೇಣೂರು ಜಮಾಲುದ್ದೀನ್ ಅಲಿಯಾಸ್ ಜಲಾಲ್ (35) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ ಪೊಲೀಸ್ ಪ್ರಕಟಣೆಯ ಪ್ರಕಾರ, 14 ವರ್ಷದ ಸಂತ್ರಸ್ತ ಬಾಲಕಿಯು ಸ್ಥಳೀಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲಾ…
ಉಡುಪಿ: ನಗರ ಪೊಲೀಸ್ ಠಾಣೆಯ ಅ.ಕ್ರ. 326/2009, ಕಲಂ 4(1)(2)(ಸಿ), 5, 6 ITP Act ಪ್ರಕರಣದಲ್ಲಿ ಮಾನ್ಯ ಪಿಸಿಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಸಿಸಿ ನಂ. 2766/2024ರ ವಾರಂಟ್ದಾರಳಾಗಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾಣೀಶ್ರೀ @ ರೇಣುಕಾ (42), ಗಂಡ ನಾಗರಾಜ್, ದಾವಣಗೆರೆ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ನಿರೀಕ್ಷಕರ ಆದೇಶ ಹಾಗೂ ಮಾರ್ಗದರ್ಶನದಂತೆ HC 40, PC 157 ಹಾಗೂ WPC 368 ನೇಯವರು ದಾವಣಗೆರೆಯ…
ಉಡುಪಿ : ದಿನಾಂಕ 21/08/2026ರಂದು ಕುಂದಾಪುರದಲ್ಲಿ ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರಿಗೆ ಆಪಾದಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಎಂಬುವರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರು ಒಳರೋಗಿಗಳಿಂದ ಚಿಕಿತ್ಸೆಯ ಸಂದರ್ಭದಲ್ಲಿ ಹಣ ಪಡೆಯುತ್ತಿರುವ ಬಗ್ಗೆ ಶ್ರೀಕಾಂತ್ ಅವರು ಪತ್ರಿಕೆಯಲ್ಲಿ ವರದಿ…
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಸೇಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಂದೂರು ತಾಲ್ಲೂಕಿನ ಯಡ್ತರೆ ಗ್ರಾಮದ ಹುದಾರ ಹೌಸ್ ನಿವಾಸಿ ಲೋಕೇಶ್ ತೇಜ ಕೊಠಾರಿ (42) ಬಂಧಿತ ಆರೋಪಿ. ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್ಸೈಕಲ್ನಲ್ಲಿ ಬಂದಿದ್ದ ಆರೋಪಿಗಳ ಪೈಕಿ…
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ,…
ಕಾಪು: ಮನೆ ಹಾಗೂ ಜಮೀನಿಗೆ ತೆರಳುತ್ತಿದ್ದ ವೃದ್ಧ ಮಹಿಳೆ ಮತ್ತು ಅವರ ಪುತ್ರನನ್ನು ತಡೆದು ಜಗಳವಾಡಿ, ಜೀವ ಬೆದರಿಕೆ ಹಾಕಿ, ಮನೆಗೆ ಕಲ್ಲು ಹಾಗೂ ಬಿಯರ್ ಬಾಟಲಿ ಎಸೆದ ಆರೋಪದಡಿ ನಾಲ್ವರ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡು ಗ್ರಾಮದ ಶಕುಂತಳಾ ಎಸ್. ಪುತ್ರನ್ (67) ಅವರು ಮಹಾರಾಷ್ಟ್ರದ ಥಾಣೆಯಲ್ಲಿ ವಾಸವಾಗಿದ್ದು, ಕಾಪುವಿನಲ್ಲಿರುವ ತಮ್ಮ ಮನೆ ಹಾಗೂ ಜಮೀನನ್ನು ಸ್ವಚ್ಛಗೊಳಿಸಲು ವರ್ಷಕ್ಕೆ 5ರಿಂದ 6 ಬಾರಿ ಊರಿಗೆ ಬರುತ್ತಿದ್ದರು. 2025ರ ಏಪ್ರಿಲ್ 13ರಂದು ಶಕುಂತಳಾ…
ಉಡುಪಿ: ಜಾಗ ಖರೀದಿಸುವ ಉದ್ದೇಶದಿಂದ ಉಡುಪಿಗೆ ಬಂದಿದ್ದ ಕೇರಳ ಮೂಲದ ಶ್ರುತಿ ವಿ. (37) ಎಂಬವರಿಗೆ ಸೈಬರ್ ವಂಚಕರು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹4 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಶ್ರುತಿ ಅವರು ಕಟಪಾಡಿಯ ರಮಾನಂದ ಶೆಟ್ಟಿ ಅವರಿಗೆ ಮೂರು ಚೆಕ್ಗಳನ್ನು ನೀಡಿದ್ದರು. ಈ ಚೆಕ್ಗಳನ್ನು ಪಾಸ್ ಮಾಡುವ ಕುರಿತು ಮಾಹಿತಿ ಪಡೆಯಲು ದಿನಾಂಕ 19-08-2026ರಂದು ಗೂಗಲ್ ಮೂಲಕ ಬ್ಯಾಂಕ್ನ ನಂಬರ್ ಹುಡುಕಿ, 08409615973ಕ್ಕೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಬ್ಯಾಂಕ್…
ಬೈಂದೂರು: ಉಪ್ಪುಂದ ಗ್ರಾಮದ ಮಯ್ಯರಕೇರಿ ಎಸ್ವಿಎಂಎಸ್ ಕಂಪೌಂಡ್ ಎದುರು ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಊದಾನೇಶ್ವರ ಭಟ್ ಮೃತಪಟ್ಟಿದ್ದಾರೆ. ಆಗಸ್ಟ್ 20ರಂದು ಬೆಳಗ್ಗೆ ಸುಮಾರು 9:30ಕ್ಕೆ ಘಟನೆ ನಡೆದಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸುತ್ತಿದ್ದ ವೇಳೆ ರಸ್ತೆಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ. ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಊದಾನೇಶ್ವರ…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ 43/2026 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಶರಣ್ ಎಂಬವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಮದ್ಲ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ಮಾನ್ಯ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. The post ಪುತ್ತೂರು: ವಾರಂಟು ಆಸಾಮಿ ಶರಣ್ ಅರೆಸ್ಟ್…!! appeared first on primetvlive.in .
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದ ಯಡ್ತಾಡಿ ಗ್ರಾಮದ ಅಲ್ತಾರು ಹಾಡಿ ಮನೆ ನಿವಾಸಿ ಸುರೇಶ್ ಕುಶಾಲ ಶೆಟ್ಟಿ (43) ಎಂಬವರು ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಗಸ್ಟ್ 19ರ ಸಂಜೆ 7 ಗಂಟೆಯಿಂದ ಆಗಸ್ಟ್ 20ರ ಬೆಳಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮೃತರ ಸಹೋದರ ರಮೇಶ್ ಶೆಟ್ಟಿ (48) ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್…
ಬೆಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಹಾಗೂ ಲಾಂಕೋ ಟೋಲ್ ಗೇಟ್ ಸಮೀಪ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್ಭಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. 20ಕ್ಕೂ…
ಬಂಟ್ವಾಳ: ವ್ಯಾಪಾರದ ಹಣ ಸಂಗ್ರಹಿಸಿ ಬೈಕ್ನಲ್ಲಿ ಹಿಂತಿರುಗುತ್ತಿದ್ದ ಸಂಸ್ಥೆಯೊಂದರ ಸೌಕರನನ್ನು ತಡೆದು, ತಲವಾರು ತೋರಿಸಿ ಬೆದರಿಸಿ ಬರೋಬ್ಬರಿ ₹8,52,000 ನಗದು ಹಣವನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಳೆ ಎಂಬಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಮಂಗಳೂರಿನ ಕಣ್ಣೂರು ಮೂಲದ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ದರೋಡೆಗೆಳಗಾದ ವ್ಯಕ್ತಿ. ಸಂಸ್ಥೆಯ…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಇರಾಕೋಡಿ ಯಲ್ಲಿ ನಡೆದಿದ್ದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ‘ಕೋಕಾ – (KCOCA) ಅಡಿ ಆರೋಪ ಎದುರಿಸುತ್ತಿದ್ದ ಐವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸುಮಳ್ಳಿಯ ಪವನ್ ಮಾರುತಿ ಗಾಯಕವಾಡ್ (33), ಅನಂತ ನಾಗೋಜಿ ಸಾವಂತ್ (36), ಬೆಳಗಾವಿ ಹುಂಚನಟ್ಟಿಯ ಬಿಟ್ಟಪ್ಪ ನಾಗಪ್ಪ ತರಿಹಾಳ (45) ಹಾಗೂ ಶಿವಮೊಗ್ಗ ಜಿಲ್ಲೆ ಸಾಗರದ ನವೀನ್ ಕುಮಾರ್ ಎಂ.…
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2026ರ ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್ ಸೈಕಲ್ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರನು ಪಿಸ್ತೂಲ್ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್…
ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಸರ್ಫೀಂಗ್ ನಲ್ಲಿ ಅಂತರಾಷ್ತ್ರೀಯ ಮಟ್ಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ,ನಮ್ಮ ದೇಶದಲ್ಲಿ ಪ್ರಥಮ ಬಾರಿಗೆ ಸರ್ಫೀಂಗ್ ಕ್ರೀಡೆಯನ್ನು ಆರಂಭಿಸಿರುವ ಮಂತ್ರ ಸರ್ಫೀಂಗ್ ಅನ್ನು ಹೊಂದಿರುವಂತಹ ಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಬಪ್ಪನಾಡು ಗ್ರಾಮದ ಕಟ್ಟದಂಗಡಿಯಿಂದ ಕೊಳಚಿಕಂಬಳ,ಪಡುಬ್ಯೆಲುಗೆ ಸಂಪರ್ಕ ಕಲ್ಪಿಸುವಂತ ಒಳ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಸುಮಾರು 2 ಕಿ.ಮಿ ರಸ್ತೆಯು ಸಂಪೂರ್ಣ ಕಿತ್ತು ಹೋಗಿ,ಅಲ್ಲಲ್ಲಿ ಹೊಂಡಗಳಿಂದ ತುಂಬಿದ್ದು…
ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಹಿರಿಯ ಪತ್ರಕರ್ತ ಹಾಗೂ ‘ಪೊಲೀಸ್ ವಾರ್ತೆ’ ಪತ್ರಿಕೆಯ ಬೆಂಗಳೂರು ವರದಿಗಾರ ಎಂ.ಎಸ್. ರಮೇಶ್ ಶೆಟ್ಟಿ ಅವರನ್ನು ಕರ್ನಾಟಕ ಪ್ರೆಸ್ ಕ್ಲಬ್ (ರಿ) ವತಿಯಿಂದ ಬೆಂಗಳೂರು ನಗರ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.ಪತ್ರಕರ್ತರ ಸಂಘಟನೆಗೆ ಹೆಚ್ಚಿನ ಬಲ ನೀಡುವುದು, ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಪತ್ರಕರ್ತರ ಹಕ್ಕು ಮತ್ತು ಹಿತಾಸಕ್ತಿಗಳ ಪರವಾಗಿ ಸಂಘಟಿತವಾಗಿ ಧ್ವನಿ ಎತ್ತುವ ಉದ್ದೇಶದಿಂದ ಈ ಜವಾಬ್ದಾರಿ…
ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್ (ರಿ), ಬೆಂಗಳೂರು ತನ್ನ ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕರಾವಳಿ ಕರ್ನಾಟಕ ಭಾಗಕ್ಕೆ ಹೊಸ ಜವಾಬ್ದಾರಿಗಳನ್ನು ಘೋಷಿಸಿದೆ. ಕರಾವಳಿ ಕರ್ನಾಟಕ ವಿಭಾಗದ ಅಧ್ಯಕ್ಷರಾಗಿ ಕುಮಾರ್ ನಾಯ್ಕ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಂಚಾಲಕರಾಗಿ ರೂಪೇಶ್ ಕಲ್ಮಾಡಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ಅವರು ಈ ಕುರಿತು ಅಧಿಕೃತ ನೇಮಕಾತಿ ಆದೇಶ…
ಉಡುಪಿ : ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಸುಮಾರು 35 ವರ್ಷಕ್ಕೂ ಮಿಕ್ಕಿ ಸೇವೆ ಸಲ್ಲಿಸಿರುವ ಸುರೇಶ್ ಶೇರಿಗಾರ್ ಅಲೆವೂರು (65 ವರ್ಷ) ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಹಿರಿಯ ನಾಯಕರುಗಳಾಗಿದ್ದ ಡಾ! ವಿ.ಎಸ್. ಆಚಾರ್ಯ ಹಾಗೂ ಸೋಮಶೇಖರ್ ಭಟ್ ಅವರ ನಿಕಟವರ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ…
ಉಡುಪಿ: ಉಡುಪಿ ಸಮೀಪದ ಅಲೆವೂರು ಗ್ರಾಮದ 3-4 ಬಾಳೆ ಹಣ್ಣು ದಾಸ್ತಾನು ಕೇಂದ್ರಗಳಿಗೆ ಏಕಕಾಲದಲ್ಲಿ ಧಿಡೀರ್ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್ ಆರ್ ಹಾಗೂ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿ ಬಾಳೆ ಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗುರುವಾರ ಮಂಜಾನೆ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿ ಬಾಳೆ ಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ ಗೋದಾಮುಗಳಿಗೆ ದಾಳಿ…
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಕೆಲಸಕ್ಕೆಂದು ಹೋಗಿ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ “ಗಂಡಸು ಕಾಣೆ” ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿ ಯಮನಪ್ಪ ಮಾದರ್ ಎಂದು ತಿಳಿದು ಬಂದಿದೆ. ಪಿರ್ಯಾದಿದಾರರಾದ ಬಸಮ್ಮ ಮಾದರ್ 35, ಇವರು ಮೂಲತಃ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಟಕನಕೇರಿಯವರು. ಕಳೆದ 4 ವರ್ಷಗಳಿಂದ ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆಯ ಅಬ್ದುಲ್ ಗಫೂರ್…