# mangalore (news sources) — RSS Amplifier

Recent posts from the 3 feeds in the RSS Amplifier directory that cover mangalore.

Page: <https://rssamplifier.com/topics/mangalore/news>  
Feed: <https://rssamplifier.com/topics/mangalore/news.md>

---

## [ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ: ಕೇರಳದ ವಿರೋಧ&#8230;ರಾಜ್ಯ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಗೆ ಸಂಸದ ಕ್ಯಾ. ಚೌಟ ತುರ್ತು ಪತ್ರ!](https://themangaloremirror.in/mangaluru-railway-network-mysuru-division-mp-brijesh-chowta-letter-dk-shivakumar/)

_2026-08-25 · guru · themangaloremirror.in_

ಮಂಗಳೂರು ಅಗಸ್ಟ್ 25: ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ ಬಗ್ಗೆ ರೈಲ್ವೆ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು ಕಾರ್ಯರೂಪಕ್ಕೆ ತರುವುದಕ್ಕೆ ರಾಜ್ಯ ಸರ್ಕಾರವು ಪೂರ್ಣ ರೀತಿಯ ಆಡಳಿತಾತ್ಮಕ ಸಹಕಾರ ನೀಡಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗೆ ಬರೆದಿರುವ ಈ…

## [ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ದುರ್ಮರಣ!](https://themangaloremirror.in/udupi-tenkapete-temple-tank-drowning-student-aditya-nayak-death/)

_2026-08-25 · guru · themangaloremirror.in_

ಉಡುಪಿ ಅಗಸ್ಟ್ 25: ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರಂತ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬವರ ಪುತ್ರ ಆದಿತ್ಯ ನಾಯಕ್ (15) ಮೃತಪಟ್ಟ ದುರ್ದೈವಿ. ದೇವಸ್ಥಾನದಲ್ಲಿ ಭಜನೆ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆದಿತ್ಯ ತನ್ನ ಸಂಬಂಧಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಎಂದು ತಿಳಿದುಬಂದಿದೆ. ಭಜನಾ ಕಾರ್ಯಕ್ರಮದ ಪ್ರಯುಕ್ತ ಭಕ್ತರು ಕೆರೆಯಲ್ಲಿ…

## [ಮಿತ್ತೂರು ಸಮೀಪ ಭೀಕರ ರಸ್ತೆ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಹರ್ಷದ್ ಸಾವು!](https://themangaloremirror.in/mittur-parlotu-road-accident-bike-rider-harshad-mura-death/)

_2026-08-25 · guru · themangaloremirror.in_

ವಿಟ್ಲ ಅಗಸ್ಟ್ 25: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ, ರಝಾಕ್ ಸಾಹೇಬ್ ಅವರ ಪುತ್ರ ಹರ್ಷದ್ ಮೃತಪಟ್ಟ ದುರ್ದೈವಿ. ಇವರು ಪುತ್ತೂರಿನ ನೆಹರುನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು. ಆಗಸ್ಟ್ 25ರ ಮಂಗಳವಾರದಂದು ಪರ್ಲೋಟು ಬಳಿ ಎಲೆಕ್ಟ್ರಿಕ್ ಕಾರು ಮತ್ತು ಹರ್ಷದ್ ಚಲಾಯಿಸುತ್ತಿದ್ದ…

## [ಪುತ್ತೂರು &#8211; ಮತ್ತೊಂದು ಹೋರಾಟಕ್ಕೆ ಮುಂದಾದ ಹಿಂದೂ ಸಂಘಟನೆಗಳು &#8211; ಆಗಸ್ಟ್ 31ರಂದು &#8216;ಪುತ್ತೂರು ಚಲೋ&#8217;ಗೆ ಕರೆ!](https://themangaloremirror.in/puttur-digital-seva-kendra-clash-august-31-puttur-chalo-call/)

_2026-08-25 · guru · themangaloremirror.in_

ಪುತ್ತೂರು ಅಗಸ್ಟ್ 25: ಪುತ್ತೂರಿನ ಡಿಜಿಟಲ್ ಸೇವಾ ಕೇಂದ್ರದಲ್ಲಿ ನಡೆದ ಗಲಾಟೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇಂದಿನ ಸ್ವಯಂಪ್ರೇರಿತ ಬಂದ್ ಯಶಸ್ವಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಮತ್ತೊಂದು ಬೃಹತ್ ಹೋರಾಟಕ್ಕೆ ಮುಹೂರ್ತವಿಟ್ಟಿವೆ. ಆಗಸ್ಟ್ 31ರ ಸೋಮವಾರದಂದು ಬೃಹತ್ ‘ಪುತ್ತೂರು ಚಲೋ’ ಪ್ರತಿಭಟನೆಗೆ ವಿಶ್ವಹಿಂದೂ ಪರಿಷತ್ (VHP), ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಸೇರಿದಂತೆ ಸಂಘ ಪರಿವಾರ ಸಂಘಟನೆಗಳು ಜಂಟಿಯಾಗಿ ಕರೆ ನೀಡಿವೆ. ಪ್ರಕರಣದಲ್ಲಿ ಗಾಯಗೊಂಡು…

## [ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆ ಅಬ್ಬರ &#8230; ಉಕ್ಕಿ ಹರಿದ ದರ್ಪಣ ತೀರ್ಥ ಹೊಳೆ, ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲ ತನಕ ನುಗ್ಗಿದ ನೀರು!](https://themangaloremirror.in/kukke-subramanya-heavy-rain-darpanatirtha-river-overflow/)

_2026-08-25 · guru · themangaloremirror.in_

ಸುಬ್ರಹ್ಮಣ್ಯ ಅಗಸ್ಟ್ 25: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ದರ್ಪಣ ತೀರ್ಥ ಹೊಳೆ ಉಕ್ಕಿ ಹರಿಯುತ್ತಿದೆ. ಸತತ ಮಳೆಯ ಪ್ರಭಾವದಿಂದ ದರ್ಪಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ನದಿ ನೀರು ಪ್ರವಾಹದ ರೂಪದಲ್ಲಿ ಬಂದು ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲ ತನಕ ನುಗ್ಗಿದೆ. ಹೊಳೆ ನೀರು ಕ್ಷೇತ್ರ ವ್ಯಾಪ್ತಿಗೆ ನುಗ್ಗಿರುವ ಹಿನ್ನೆಲೆಯಲ್ಲಿ ಕುಕ್ಕೆ…

## [ನಿಯಮ ಉಲ್ಲಂಘಿಸಿ ಗ್ಲಾಸ್ ಹಾಗೂ ನಂಬರ್ ಪ್ಲೇಟ್‌ಗಳಿಗೆ ಸ್ಟಿಕ್ಕರ್ ಅಳವಡಿಸಿ ಸಂಚಾರ: ಪುತ್ತೂರು ಸಂಚಾರ ಪೊಲೀಸರಿಂದ ದಂಡ ಪ್ರಯೋಗ, ಖಡಕ್ ಎಚ್ಚರಿಕೆ!](https://themangaloremirror.in/puttur-traffic-police-fine-vehicles-for-glass-and-number-plate-stickers/)

_2026-08-25 · guru · themangaloremirror.in_

ಪುತ್ತೂರು ಅಗಸ್ಟ್ 25: ವಾಹನ ಚಾಲನೆಗೆ ಅಡ್ಡಿಯಾಗುವಂತೆ ವಿಂಡ್‌ಸ್ಕ್ರೀನ್ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸಿ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವಂತೆ ಸ್ಟಿಕ್ಕರ್ ಹಾಕಿ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣಾ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ. ಸಾರ್ವಜನಿಕರು ಯಾವುದೇ ಉತ್ಸವಗಳು, ಹಬ್ಬ ಹರಿದಿನಗಳು ಅಥವಾ ಖಾಸಗಿ ಕಾರ್ಯಕ್ರಮಗಳ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು. ಒಂದು ವೇಳೆ ನಿಯಮ ಮೀರಿ…

## [ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಬಂದ್ ಕರೆ ಸುಳ್ಳು ಸುದ್ದಿ ಪ್ರಸಾರ: ಪುತ್ತೂರು ನಗರ ಠಾಣೆಯಲ್ಲಿ ಮಂಜುನಾಥ್ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲು!](https://themangaloremirror.in/puttur-bandh-fake-news-fir-against-manjunath-whatsapp-user/)

_2026-08-25 · guru · themangaloremirror.in_

ಪುತ್ತೂರು ಅಗಸ್ಟ್ 25: ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಮತ್ತು ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ವಾಟ್ಸಾಪ್‌ನಲ್ಲಿ ‘ಮಂಜುನಾಥ್’ ಎಂಬ ಹೆಸರಿನ ಖಾತೆ ಹೊಂದಿರುವ ವ್ಯಕ್ತಿಯು ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ದಿನಾಂಕ 26.08.2026 ರಂದು ‘ಪುತ್ತೂರು ಬಂದ್’ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ…

## [ಪುತ್ತೂರಿನಲ್ಲಿ ಸ್ವಯಂಪ್ರೇರಿತ ಬಂದ್ ಹಾಗೂ ಈದ್ ಮಿಲಾದ್: ಎಸ್ಪಿ ಅರುಣ್ ಕುಮಾರ್ ಭೇಟಿ, ಪರಿಶೀಲನೆ](https://themangaloremirror.in/puttur-bandh-and-eid-milad-sp-arun-kumar-inspects-security/)

_2026-08-25 · guru · themangaloremirror.in_

ಪುತ್ತೂರು ಅಗಸ್ಟ್ 25: ಹಿಂದೂ ಜಾಗರಣ ವೇದಿಕೆ ವತಿಯಿಂದ ಪುತ್ತೂರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಅವರು ಇಂದು ಪುತ್ತೂರಿಗೆ ಭೇಟಿ ನೀಡಿ ಭದ್ರತಾ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಪಿ, “ಜಿಲ್ಲಾದ್ಯಂತ ಇಂದು ಈದ್ ಮಿಲಾದ್ ಆಚರಣೆ ಶಾಂತಿಯುತವಾಗಿ ನಡೆಯುತ್ತಿದೆ. ಪುತ್ತೂರಿನಲ್ಲೂ ಬೆಳಿಗ್ಗೆ ಈದ್ ಮಿಲಾದ್ ಮೆರವಣಿಗೆ ಅತ್ಯಂತ…

## [ಮಲ್ಪೆ ಬೋಟ್ ನಲ್ಲಿ ಮೀನುಗಾರಿಕಾ ಕಾರ್ಮಿಕನ ಕೊಲೆ ಪ್ರಕರಣ &#8211; ಪೊಲೀಸರ ಮಿಂಚಿನ ಕಾರ್ಯಾಚರಣೆ ಆರೋಪಿ ಅರೆಸ್ಟ್](https://themangaloremirror.in/malpe-harbor-fisherman-abhishek-murdered-chikkamagaluru/)

_2026-08-25 · guru · themangaloremirror.in_

ಉಡುಪಿ ಅಗಸ್ಟ್ 25: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್‌ನಲ್ಲಿ ಮೀನುಗಾರಿಕಾ ಕಾರ್ಮಿಕನ ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಉಡುಪಿ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಮೃತ ಅಭಿಷೇಕ್ ಹಾಗೂ ಆರೋಪಿ ಗೋವಿಂದ ರಾಜು ಇಬ್ಬರೂ ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ‘ಶ್ರೀ ಮಹಾಕಾಳಿ’ ಬೋಟ್‌ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.…

## [&#8216;ಟಾಕ್ಸಿಕ್&#8217; ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ನಟ ಯಶ್; ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ!](https://themangaloremirror.in/rocking-star-yash-arrives-in-mangaluru-toxic-movie/)

_2026-08-25 · guru · themangaloremirror.in_

ಮಂಗಳೂರು ಅಗಸ್ಟ್ 25: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಇಂದು ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ನೆಚ್ಚಿನ ನಟನಿಗೆ ಅದ್ದೂರಿ ಸ್ವಾಗತ ಕೋರಿದರು. ಮಂಗಳೂರಿಗೆ ಆಗಮಿಸಿರುವ ನಟ ಯಶ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅಂದಹಾಗೆ, ತಮ್ಮ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ…

## [Point once, get highlights (Sponsored)](https://crawlproof.com/a/wWkDEFQI7vxE)

_2026-08-25 · **Sponsored**_

Get minutes worth watching from a whole game — point once

## [ಗಂಡನ ಮನೆ ತೊರೆದಿದ್ದನ್ನು ದೃಢಪಡಿಸಿದ ಮೇಘಾ ನಾಯರ್: ಬಸ್ ಕಂಡಕ್ಟರ್ ಜೊತೆ ಓಡಿಹೋದ್ರು ಅನ್ನೋ ವದಂತಿಗೆ ಕ್ಲಾರಿಟಿ!](https://themangaloremirror.in/megha-nair-breaks-silence-on-leaving-akhil-nrd-house/)

_2026-08-22 · guru · themangaloremirror.in_

ಕೇರಳ: ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಅಖಿಲ್ ಎನ್ಆರ್‌ಡಿ ಹಾಗೂ ಮೇಘಾ ನಾಯರ್ ಅವರ ಸಂಬಂಧ ಮುರಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಮೇಘಾ ನಾಯರ್ ಅವರೇ ಮೌನ ಮುರಿದಿದ್ದಾರೆ. ತಾವು ಅಖಿಲ್ ಅವರ ಎನ್‌ಆರ್‌ಡಿ ನಿವಾಸದಿಂದ ಹೊರಟು ಬಂದಿರುವುದು ನಿಜ ಹಾಗೂ ಪ್ರಸ್ತುತ ಅನೂಪ್ ಜೊತೆ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮೇಘಾ ರಾತ್ರಿ ವೇಳೆ ನೈಟಿ ಧರಿಸಿ ಕೈಯಲ್ಲಿ ಬ್ಯಾಗ್ ಹಿಡಿದು ಮನೆಯಿಂದ ಹೊರಡುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಜಾಲತಾಣಗಳಲ್ಲಿ…

## [ಪುತ್ತೂರು ಜೆರಾಕ್ಸ್ ಅಂಗಡಿ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಿಸಿಟಿವಿಯಲ್ಲಿ ವಾಗ್ವಾದ, ನೂಕಾಟ ತಳ್ಳಾಟದ ವಿಡಿಯೋ](https://themangaloremirror.in/puttur-darbe-xerox-shop-attack-case-cctv-footage-revealed/)

_2026-08-22 · guru · themangaloremirror.in_

ಪುತ್ತೂರು ಅಗಸ್ಟ್ 22: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿರುವ ಜೆರಾಕ್ಸ್ ಅಂಗಡಿಯೊಂದರಲ್ಲಿ ನಡೆದ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಟಿವಿ (CCTV) ಕ್ಯಾಮೆರಾ ದೃಶ್ಯಾವಳಿಗಳು ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಭಾರೀ ರಾಜಕೀಯ ಹಾಗೂ ಸಾರ್ವಜನಿಕ ವಿವಾದಕ್ಕೆ ಕಾರಣವಾಗಿದ್ದ ಈ ಘಟನೆಯ ಅಸಲಿಯತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲೇನಿದೆ?: ದಾಖಲೆ ಪತ್ರಗಳ ಜೆರಾಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲಕರು…

## [105 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ ಕೋರ್ಟ್](https://themangaloremirror.in/supreme-court-grants-relief-from-life-imprisonment-to-105-year-old-man/)

_2026-08-22 · guru · themangaloremirror.in_

ನವದೆಹಲಿ, ಆಗಸ್ಟ್ 22: 1988ರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 105 ವರ್ಷದ ರಸಿಕ್ ಚಂದ್ರ ಮಂಡಲ್ ಅವರಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿ ಮಹತ್ವದ ಆದೇಶ ಹೊರಡಿಸಿದೆ. ವೃದ್ಧಾಪ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿದ ನ್ಯಾಯಾಲಯ, ಉಳಿದಿರುವ ಜೀವಾವಧಿ ಶಿಕ್ಷೆಯನ್ನು ಮನ್ನಾ ಮಾಡಿ ಅವರನ್ನು ಮತ್ತೆ ಜೈಲಿಗೆ ಕಳುಹಿಸದಂತೆ ಆದೇಶಿಸಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರಸಿಕ್ ಚಂದ್ರ ಮೊಂಡಲ್ ಎಂಬುವವರು 1988 ರಲ್ಲಿ ನಡೆದ ಕೊಲೆ…

## [ಅದು ನನ್ನ ಕರ್ತವ್ಯ&#8221;: ಮದುವೆ ಸಡಗರದಲ್ಲೂ ಅಸ್ವಸ್ಥರಿಗೆ ಆಸರೆಯಾಗಿ &#8216; ರಿಯಲ್ ಹೀರೋ&#8217; ಎನಿಸಿಕೊಂಡ ಕಣ್ಣೂರಿನ ವಧು ಡಾ. ಶಿರಿನ್!](https://themangaloremirror.in/bride-doctor-dr-shirin-subair-gives-first-aid-at-wedding-viral-video/)

_2026-08-22 · guru · themangaloremirror.in_

ಕಣ್ಣೂರು ಅಗಸ್ಟ್ 22: ವಿವಾಹದ ಸಂಭ್ರಮದಲ್ಲಿದ್ದ ವೈದ್ಯೆಯೊಬ್ಬರು ತಮ್ಮ ಮದುವೆಯ ಉಡುಪಿನಲ್ಲೇ ಅಸ್ವಸ್ಥಗೊಂಡ ಇಬ್ಬರು ಅಡುಗೆ ಸಿಬ್ಬಂದಿಗೆ ತುರ್ತು ಪ್ರಥಮ ಚಿಕಿತ್ಸೆ ನೀಡಿ, ವೈದ್ಯಕೀಯ ವೃತ್ತಿಧರ್ಮ ಹಾಗೂ ಮಾನವೀಯತೆಯನ್ನು ಎತ್ತಿಹಿಡಿದ ಅಪರೂಪದ ಘಟನೆ ನಡೆದಿದೆ. ವಧುವಿನ ಅಲಂಕಾರದಲ್ಲಿದ್ದ ಡಾ. ಶಿರಿನ್ ಸುಬೈರ್ ಅಸ್ವಸ್ಥರಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕಣ್ಣೂರಿನ ಪಾನೂರು ಮೂಲದ ಡಾ. ಶಿರಿನ್ ಸುಬೈರ್, ಒಟ್ಟಪಾಲಂನ…

## [ಕಿರುತೆರೆಯಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಕುಂದಾಪುರ ಬೆಡಗಿ: &#8216;ಮಹಾಕಾಳಿ&#8217;ಯಾಗಿ ಮಿಂಚಲು ಸಜ್ಜಾದ ಭೂಮಿ ಶೆಟ್ಟಿ!](https://themangaloremirror.in/bhoomi-shetty-mahakali-pan-india-movie-first-look-poster/)

_2026-08-22 · guru · themangaloremirror.in_

ಬೆಂಗಳೂರು: ‘ಕಿನ್ನರಿ’ ಧಾರಾವಾಹಿ ಹಾಗೂ ‘ಬಿಗ್ ಬಾಸ್ ಕನ್ನಡ 7’ ಮೂಲಕ ಕನ್ನಡಿಗರ ನೆಚ್ಚಿನ ನಟಿಯಾಗಿದ್ದ ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ ಇದೀಗ ದೊಡ್ಡ ಪರದೆಯ ಮೇಲೆ ಭಾರಿ ಧಮಾಕಾ ಮಾಡಲು ಸಜ್ಜಾಗಿದ್ದಾರೆ. ‘ಹನುಮಾನ್’ ಚಿತ್ರದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ್ದ ನಿರ್ದೇಶಕ ಪ್ರಶಾಂತ್ ವರ್ಮಾ ಕಥೆ ಬರೆದಿರುವ ‘ಮಹಾಕಾಳಿ’ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಭೂಮಿ ಶೆಟ್ಟಿ ನಾಯಕಿಯಾಗಿ ‘ಮಹಾಕಾಳಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕುಂದಾಪುರ ಮೂಲದ ಭೂಮಿ ಶೆಟ್ಟಿ…

## [ತಿರುಮಲದಲ್ಲಿ ಇನ್ಮುಂದೆ &#8216;ರೋಬೋಟ್ ನಾಯಿ&#8217; ಪಹರೆ: ಭಕ್ತರ ರಕ್ಷಣೆಗೆ ತಿರುಪತಿ ದೇವಸ್ಥಾನದ ಬಿಗ್ ಪ್ಲಾನ್!](https://themangaloremirror.in/robot-dog-to-guard-tirumala-from-now-on-tirupati-temples-big-plan-to-protect-devotees/)

_2026-08-22 · guru · themangaloremirror.in_

ಅಮರಾವತಿ, ಆಗಸ್ಟ್ 22: ತಿರುಮಲ ತಿರುಪತಿ ದೇವಸ್ಥಾನಂ ವನ್ಯಜೀವಿಗಳ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಅರಣ್ಯದಿಂದ ಕೂಡಿದ ತಿರುಮಲದಲ್ಲಿ ವನ್ಯಮೃಗಗಳಿಂದ ಭಕ್ತರ ಸುರಕ್ಷತೆಯನ್ನು ಹೆಚ್ಚಿಸಲು ಕೃತಕ ಬುದ್ಧಿಮತ್ತೆ ಚಾಲಿತ ರೋಬೋಟಿಕ್ ನಾಯಿಗಳ ಬಳಕೆಗೆ ಚಿಂತನೆ ನಡೆಸಲಾಗಿದೆ. ದಟ್ಟವಾದ ಅರಣ್ಯ ಪ್ರದೇಶದಲ್ಲಿ ನಿಯೋಜಿಸಲು ಅದರ ಸಿದ್ಧತೆಯನ್ನು ನಿರ್ಣಯಿಸಲು ಟಿಟಿಡಿ ಹಿರಿಯ ಅಧಿಕಾರಿ ಚ. ವೆಂಕಯ್ಯ ಚೌಧರಿ ಮತ್ತು ಇತರ ಅಧಿಕಾರಿಗಳು ಇತ್ತೀಚೆಗೆ ಶ್ರೀ ಪದ್ಮಾವತಿ ಅತಿಥಿ ಗೃಹದಲ್ಲಿ ಚತುರ್ಭುಜ…

## [ಪಾಲ್ಘಾಟ್ ನಿಂದ ಮೈಸೂರು ರೈಲ್ವೆ ವಿಭಾಗಕ್ಕೆ ಮಂಗಳೂರು : ಕೇಂದ್ರದ ನಿರ್ಧಾರ ‘ಏಕಪಕ್ಷೀಯ’ ಎಂದ ಕೇರಳ ನಾಯಕರು; ತಕ್ಷಣದ ಮರುಪರಿಶೀಲನೆಗೆ ಆಗ್ರಹ!](https://themangaloremirror.in/mangaluru-railway-transfer-vd-satheesan-criticizes-railway-board-decision/)

_2026-08-22 · guru · themangaloremirror.in_

ತಿರುವನಂತಪುರಂ ಅಗಸ್ಟ್ 22: ಮಂಗಳೂರು ರೈಲ್ವೇ ಪ್ರದೇಶವನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ನೈರ್ಮಲ್ಯ ಮತ್ತು ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗಕ್ಕೆ ವಿಲೀನಗೊಳಿಸುವ ರೈಲ್ವೇ ಮಂಡಳಿಯ ನಿರ್ಧಾರವನ್ನು ಕೇರಳ ಸಿಎಂ ವಿ.ಡಿ. ಸತೀಶನ್ ಶನಿವಾರ ತೀವ್ರವಾಗಿ ಖಂಡಿಸಿದ್ದಾರೆ. ಈ ನಿರ್ಧಾರವು ‘ಏಕಪಕ್ಷೀಯ’ವಾಗಿದ್ದು, ಕೇಂದ್ರ ಸರ್ಕಾರವು ಇದನ್ನು ತಕ್ಷಣವೇ ಮರುಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕೇರಳ ರಾಜ್ಯ ಸರ್ಕಾರಕ್ಕೆ ಯಾವುದೇ ಮುನ್ಸೂಚನೆ ನೀಡದೆ ಅಥವಾ ಚರ್ಚೆ…

## [ಅಸುರಕ್ಷಿತ ಆಹಾರ, ನಕಲಿ ಔಷಧ ತಡೆಗೆ ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ &#8216;ವಾಚ್ ಟೀಂ&#8217;: ಸಚಿವ ಯು.ಟಿ. ಖಾದರ್](https://themangaloremirror.in/ut-khader-announces-watch-team-for-food-safety-and-fake-medicines/)

_2026-08-22 · guru · themangaloremirror.in_

ಮಂಗಳೂರು ಅಗಸ್ಟ್ 22: ರಾಜ್ಯದಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳು ಹಾಗೂ ನಕಲಿ ಔಷಧಗಳ ಮಾರಾಟಕ್ಕೆ ತಡೆ ನೀಡುವ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ‘ವಾಚ್ ಟೀಂ’ (Watch Team) ರಚಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ನಕಲಿ ಜಾಲಕ್ಕೆ ಕಡಿವಾಣ ಹಾಕುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದರು.…

## [ಆಹಾರ ಸುರಕ್ಷತೆ ಮತ್ತು ನಕಲಿ ಔಷಧ ಪತ್ತೆಗೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಕಾವಲು ಪಡೆ &#8211; ಯು.ಟಿ. ಖಾದರ್](https://newskarkala.com/2026/08/22/wacth-team/)

_2026-08-22 · Newskarkala Desk · News Karkala_

ಮಂಗಳೂರು : ಆಹಾರ ಸುರಕ್ಷತೆ ಮತ್ತು ನಕಲಿ ಔಷಧಿಗಳ ನಿರಂತರ ಮೇಲ್ವಿಚಾರಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾವಲು ಪಡೆ (ವಾಚ್ ಟೀಮ್) ರಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಆಹಾರ ಮತ್ತು ನಕಲಿ ಔಷಧಿಗಳ ಬಗ್ಗೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು ಸುಲಭವಾಗುವಂತೆ ಕ್ಯೂಆರ್ ಕೋಡ್ ರಚಿಸಲಾಗಿದೆ. ಪ್ರತಿ ಹೋಟೆಲ್ ಮತ್ತು…

## [ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ ಜನ್ಮದಿನಾಚರಣೆಯ ಸಂಭ್ರಮ](https://newskarkala.com/2026/08/22/gopa-shetty-105-birthday/)

_2026-08-22 · Newskarkala Desk · News Karkala_

ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ ಟ್ರಸ್ಟಿನಿಂದ 3 ಲಕ್ಷದ 30 ಸಾವಿರದ 503 ರೂ. ನೆರವು ಕಾರ್ಕಳ : ಬರಡು ಭೂಮಿಯನ್ನು ವಿದ್ಯಾಕಾಶಿಯನ್ನಾಗಿ ಮಾಡಿದ ಕೀರ್ತಿ ಡಾ.ಸುಧಾಕರ್ ಶೆಟ್ಟಿಯವರಿಗೆ ಸಲ್ಲುತ್ತದೆ. ದಾನ ಮಾಡಲಿಕ್ಕೆ ಮನಸ್ಸು ಬೇಕು. ಅದರ ಜೊತೆಗೆ ಕೊಡುವ ಸಂಸ್ಕಾರವು ಬೇಕು. ಇವೆರಡನ್ನು ಮೈಗೂಡಿಸಿಕೊಂಡ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸುಂದರ ಕಾರ್ಯಕ್ರಮ ಇದಾಗಿದೆ ಎಂದು ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಹೇಳಿದರು. ಅವರು…

## [Sync Bookmarks Everywhere (Sponsored)](https://crawlproof.com/a/CWVIaF6Sx7gF)

_2026-08-22 · **Sponsored**_

Two-way sync keeps folders and toolbar intact across Chrome, Firefox, and Safari.

## [ಆ. 30 : ರಂಗನಪಲ್ಕೆಯಲ್ಲಿ ಅಮ್ಮ ಸಭಾಭವನ &#8211; ಕಲ್ಯಾಣ ಸಿಂಧೂರ ಉದ್ಘಾಟನೆ](https://newskarkala.com/2026/08/22/amma-sabhabavan-kalyan-sindoora/)

_2026-08-22 · Newskarkala Desk · News Karkala_

ಕಾರ್ಕಳ : ಕೌಡೂರು – ರಂಗನಪಲ್ಕೆಯಲ್ಲಿ ಆ. 30ರಂದು ಬೆಳಿಗ್ಗೆ 9.30ಕ್ಕೆ ಅಮ್ಮ ಸಭಾಭವನ – ಕಲ್ಯಾಣ ಸಿಂಧೂರ ಲೋಕಾರ್ಪಣೆಗೊಳ್ಳಲಿದೆ.ಶಾಂತ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ವಿ. ಸುನಿಲ್‌ ಕುಮಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಕೌಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವನಾಥ ಭಟ್‌, ಪಳ್ಳಿ – ಅಡಪಾಡಿ ಶ್ರೀ ಕ್ಷೇತ್ರದ ಧರ್ಮದರ್ಶಿ ಪುಂಡಲೀಕ…

## [ಹೃದಯಾಘಾತಕ್ಕೆ ವ್ಯಕ್ತಿ ಬಲಿ](https://newskarkala.com/2026/08/22/heart-attack-girish-acharya-no-more/)

_2026-08-22 · Newskarkala Desk · News Karkala_

ಕಾರ್ಕಳ : ಹೃದಯಾಘಾತಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಆ. 22ರಂದು ಯರ್ಲಪಾಡಿ ಕಾಂತರಗೋಳಿಯಲ್ಲಿ ನಡೆದಿದೆ. ಗಿರೀಶ್ ಆಚಾರ್ಯ (44 ವರ್ಷ) ಮೃತ ದುರ್ದೈವಿ. ಮಾಹೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಇವರು ಇಂದು ಬೆಳಿಗ್ಗೆ ಮನೆಯಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. The post ಹೃದಯಾಘಾತಕ್ಕೆ ವ್ಯಕ್ತಿ ಬಲಿ appeared first on News Karkala .

## [ಬಿಜೆಪಿ ಅಧಿವೇಶನಕ್ಕೆ ಅಡ್ಡಿಪಡಿಸುತ್ತಿರುವ ಹಿಂದೆ ಹಿಡನ್ ಅಜೆಂಡಾ ಇದೆ : ಯು.ಟಿ.ಖಾದರ್ ಆರೋಪ](https://newskarkala.com/2026/08/22/u-t-khadar-manglore/)

_2026-08-22 · Newskarkala Desk · News Karkala_

ಮಂಗಳೂರು : ಪ್ರತಿಪಕ್ಷವಾದ ಬಿಜೆಪಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಅಧಿವೇಶನ ನಡೆಸಲು ಅಡ್ಡಿ ಪಡಿಸುವ ಮೂಲಕ ಜನರಿಗೆ ಸಾಮಾಜಿಕ ವಂಚನೆ ಮಾಡುತ್ತಿದ್ದು, ಇದರ ಹಿಂದೆ ಹಿಡನ್ ಅಜೆಂಡಾ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಆರೋಪಿಸಿದ್ದಾರೆ. ಮಂಗಳೂರು ಸರ್ಕ್ಯೂಟ್ ಹೌಸ್‌ನಲ್ಲಿ ಆ.22ರಂದು ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಬರ, ಅತಿವೃಷ್ಟಿಯ ಸಮಸ್ಯೆ ಇದೆ. ಇಂತಹ ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ…

## [ಪುತ್ತೂರು ಜೆರಾಕ್ಸ್ ಅಂಗಡಿ ಹಲ್ಲೆ ಪ್ರಕರಣ: ಪೊಲೀಸ್ ಪಕ್ಷಪಾತ ಖಂಡಿಸಿ ಡಿವೈಎಸ್ಪಿಗೆ ಬಿಜೆಪಿ ನಿಯೋಗ ಮನವಿ; ಆರೋಪಿಗಳ ತಕ್ಷಣ ಬಂಧನಕ್ಕೆ ಆಗ್ರಹ!](https://themangaloremirror.in/puttur-xerox-shop-attack-case-bjp-delegation-meets-dysp/)

_2026-08-22 · guru · themangaloremirror.in_

ಪುತ್ತೂರು ಅಗಸ್ಟ್ 22: ನಗರದ ಜೆರಾಕ್ಸ್ ಅಂಗಡಿಯೊಂದರಲ್ಲಿ ನಡೆದ ಹಲ್ಲೆ ಹಾಗೂ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಿಯೋಗವು ಪುತ್ತೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದೆ. ವಿಧಾನಪರಿಷತ್ ಸದಸ್ಯ ಕಿಶೋರ್ ಪುತ್ತೂರು ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದ ನಿಯೋಗವು ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರನ್ನು ಭೇಟಿಯಾಗಿ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿತು. ಜೆರಾಕ್ಸ್ ತೆಗೆಯುವ…

## [ಮಂಗಳೂರು ಮೈಸೂರು ವಿಭಾಗಕ್ಕೆ ವಿಲೀನ: &#8216;ಪಾಲಕ್ಕಾಡ್‌ಗೆ ಓಣಂ ಹಬ್ಬದ ದುಃಖದ ಕೊಡುಗೆ&#8217; ಎಂದ ಕೇರಳ; ₹600 ಕೋಟಿ ಆದಾಯ ನಷ್ಟದ ಕಳವಳ!](https://themangaloremirror.in/mangaluru-railway-merger-kerala-palakkad-division-losses-600-crore/)

_2026-08-22 · guru · themangaloremirror.in_

ಮಂಗಳೂರು/ಪಾಲಕ್ಕಾಡ್ ಅಗಸ್ಟ್ 22: ಮಂಗಳೂರು ರೈಲ್ವೇ ಪ್ರದೇಶವನ್ನು ದಕ್ಷಿಣ ರೈಲ್ವೆಯ (Southern Railway) ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗಕ್ಕೆ ವರ್ಗಾಯಿಸುವ ಕೇಂದ್ರ ರೈಲ್ವೇ ಮಂಡಳಿಯ ನಿರ್ಧಾರವು ಕರಾವಳಿ ಕರ್ನಾಟಕದಲ್ಲಿ ಹರ್ಷ ಮೂಡಿಸಿದ್ದರೆ, ನೆರೆಯ ಕೇರಳದಲ್ಲಿ ತೀವ್ರ ಆಕ್ರೋಶ ಹಾಗೂ ಕಳವಳಕ್ಕೆ ಕಾರಣವಾಗಿದೆ. “ರೈಲ್ವೇ ಇಲಾಖೆಯು ಕೇರಳಕ್ಕೆ ಓಣಂ ಹಬ್ಬದ ದುಃಖದ ಕೊಡುಗೆ ನೀಡಿದೆ. ಮಂಗಳೂರನ್ನು ಕಳೆದುಕೊಳ್ಳುವುದರೊಂದಿಗೆ 70 ವರ್ಷ ಹಳೆಯ ಪಾಲಕ್ಕಾಡ್ ವಿಭಾಗ…

## [ಕೊಕ್ಕಡ: ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ, ಪಾರ್ಕಿಂಗ್ ಹರೀಶ್ ಅನಾರೋಗ್ಯದಿಂದ ನಿಧನ](https://newsnotout.com/2026/08/22/parking-harish-no-more/)

_2026-08-22 · Team Newsnotout · Newsnotout_

ನ್ಯೂಸ್ ನಾಟೌಟ್ : ಕೊಕ್ಕಡದ ಕೊಲ್ಲಾಜೆಪಲ್ಕೆ ನಿವಾಸಿ ಪಾರ್ಕಿಂಗ್ ಹರೀಶ್ (36) ಅವರು ಅನಾರೋಗ್ಯದಿಂದ ಆ. 20ರಂದು ರಾತ್ರಿ ನಿಧನರಾದರು. ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ಹರೀಶ್ ಅವರು ಉತ್ತಮ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಸರಳ, ಸ್ನೇಹಪರ ವ್ಯಕ್ತಿತ್ವದ ಅವರು ಸ್ಥಳೀಯವಾಗಿ ಅನೇಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. The post ಕೊಕ್ಕಡ: ಸಮಾಜ…

## [ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್](https://newskarkala.com/2026/08/22/karnataka-bans-alalogue-pannir/)

_2026-08-22 · Newskarkala Desk · News Karkala_

ಬೆಂಗಳೂರು : ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ.ರಾಜ್ಯಾದ್ಯಂತ ಪನ್ನೀರ್‌ ಹೆಸರಿನಲ್ಲಿ ಅನಾಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ‌ ಪನ್ನೀರ್ ನಿಷೇಧ ಮಾಡಿ ಆದೇಶಿಸಲಾಗಿದೆ. ಕರ್ನಾಟಕವು ಹಲವಾರು ಪನ್ನೀರ್‌ ಮಾದರಿಗಳನ್ನು ಪರೀಕ್ಷಿಸಿದ್ದು, ಯಾವುದೇ ಕಲಬೆರಕೆ ಇಲ್ಲ ಎಂದು ಕಂಡುಬಂದಿದೆ. ಪನ್ನೀರ್‌ನಲ್ಲಿ ಸಸ್ಯಜನ್ಯ ಎಣ್ಣೆ, ಕೊಬ್ಬು ಅಥವಾ ಇತರೆ ಡೈರಿ ಪದಾರ್ಥಗಳೊಂದಿಗೆ ಕಲಬೆರಕೆ…

## [500 ಕೆಪಿಎಸ್‌ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ನೆರವು – ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿಕೆಶಿ ಸಹಿ](https://newskarkala.com/2026/08/22/kps-school-development/)

_2026-08-22 · Newskarkala Desk · News Karkala_

ಬೆಂಗಳೂರು : ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ ಸಹಯೋಗದೊಂದಿಗೆ 1,750 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶುಕ್ರವಾರ ಸಹಿ ಹಾಕಿದರು. ಈ ವೇಳೆ ಡಿಸಿಎಂ ಡಾ. ಜಿ. ಪರಮೇಶ್ವರ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್…

## [ಟಾಕ್ಸಿಕ್ ಕೌಂಟ್‌ಡೌನ್&#8230; ವಿಶ್ವ &#038; ಕರ್ನಾಟಕದಲ್ಲಿ ಹೊಸ ದಾಖಲೆ ಬರೆದ ಯಶ್ &#8216;ಟಾಕ್ಸಿಕ್&#8217;!ಟಿಕೆಟ್ ಬುಕ್ಕಿಂಗ್ ಶುರುವಾಗಿ, ಸ್ವಲ್ಪ ಹೊತ್ತಿನಲ್ಲೇ ಎಲ್ಲಾ ಟಿಕೆಟ್ ಸೋಲ್ಡ್‌ ಔಟ್!!](https://newsnotout.com/2026/08/22/countdown-to-yash-starrer-toxic-on-26-august-2026-is-underway-with-only-04-days-to-go-as-of-21-august/)

_2026-08-22 · Team Newsnotout · Newsnotout_

ನ್ಯೂಸ್ ನಾಟೌಟ್ : ಯಶ್ ನಾಯಕತ್ವದ ಟಾಕ್ಸಿಕ್ ಸಿನಿಮಾ ಭಾರೀ ಕುತೂಹಲ ಕೆರಳಿಸುತ್ತಿದೆ. ಆಗಸ್ಟ್ 26ರಂದು ಟಾಕ್ಸಿಕ್ ಸಿನಿಮಾ ದೇಶ ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆ, ಹಾಲಿವುಡ್‌ನಲ್ಲೂ ಟ್ರೇಲರ್ ಬಿಡುಗಡೆಯಾಗಿದೆ. ಟಾಕ್ಸಿಕ್ ಸಿನಿಮಾ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಬಿಡುಗಡೆಗೂ ಮೊದಲೇ ಯಶ್ ಟಾಕ್ಸಿಕ್ ಸಿನಿಮಾ ದಾಖಲೆ ಬರೆದಿದೆ. 2.6 ಲಕ್ಷಕ್ಕೂ ಅಧಿಕ ಟಿಕೆಟ್ ಮಾರಾಟವಾಗಿದೆ. ಅಡ್ವಾನ್ಸ್ ಬುಕಿಂಗ್ ಮೂಲಕ ಈ ಚಿತ್ರವು ಭರ್ಜರಿ ಆದಾಯ ಗಳಿಸಿದೆ....…

## [ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅ.23 ಹಾಗೂ 24ರಂದು ಸರ್ಪಸಂಸ್ಕಾರ,ಆಶ್ಲೇಷ ಬಲಿ, ನಾಗಪ್ರತಿಷ್ಠೆ ಸೇವೆ ಇಲ್ಲ](https://newsnotout.com/2026/08/22/tomorrow-and-there-after-tomorrow-there-will-be-no-ashlesha-bali-service-sarpa-samskara-in-kukke/)

_2026-08-22 · Team Newsnotout · Newsnotout_

ನ್ಯೂಸ್ ನಾಟೌಟ್ : ದ.ಕ. ಜಿಲ್ಲೆಯಲ್ಲಿರುವ ಪ್ರಸಿದ್ಧ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪಸಂಸ್ಕಾರ, ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ.ಆ.23ರಂದು ಏಕಾದಶಿ ಹಾಗೂ ಆ.24ರಂದು ಅತಿರಿಕ್ತ ಏಕಾದಶಿ ಇರುವುದರಿಂದ ಪೂಜೆ ನಡೆಯುವುದಿಲ್ಲ.. ಉಳಿದಂತೆ ದೇವರ ದರ್ಶನ, ಮಂಗಳಾರತಿ, ಅರ್ಚನೆ, ಮಹಾಪೂಜೆ ಸಹಿತ ಇತರ ಎಲ್ಲ ಪೂಜಾ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ದೇಗುಲದ ಪ್ರಕಟಣೆ ತಿಳಿಸಿದೆ. The post ಕುಕ್ಕೆ…

## [CLI-first decentralized GPU compute (Sponsored)](https://crawlproof.com/a/mGIFZR4MuJIV)

_2026-08-22 · **Sponsored**_

Pay workers or run your GPU for FFmpeg transcode and AI inference.

## [ಮೈಸೂರು: ದೇಶದಲ್ಲಿಯೇ ಮೊದಲು; ಬಸವನಹುಳು ಸಾಕಾಣಿಕೆ ಕೇಂದ್ರ ಆರಂಭ](https://newsnotout.com/2026/08/22/state-news-the-countrys-first-snail-farming-center-in-mysore/)

_2026-08-22 · Team Newsnotout · Newsnotout_

ನ್ಯೂಸ್ ನಾಟೌಟ್ : ನಗರದ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ವತಿಯಿಂದ ಬಸವನಹುಳು ಸಾಕಾಣಿಕೆ ಕೇಂದ್ರ ಆರಂಭಿಸಲಾಗಿದೆ. ಇದು ಅಕಾಡೆಮಿಕ್ ಆಗಿ ಈ ಪ್ರಯೋಗ ದೇಶದಲ್ಲೇ ಮೊದಲು ಎನ್ನಲಾಗಿದೆ. ಕೇಂದ್ರ ಸರ್ಕಾರದ ಬಯೋಟೆಕ್ನಾಲಜಿ ಇಂಡಸ್ಟ್ರಿ ರಿಸರ್ಚ್ ಅಸಿಸ್ಟೆನ್ಸ್ ಕೌನ್ಸಿಲ್(ಬಿಐಆರ್‌ಸಿ), ಬಯೋಟೆಕ್ನಾಲಜಿ ಇಗ್ನಿಷನ್ ಗ್ರಾಂಟ್ (ಬಿಐಜಿ), ಕರ್ನಾಟಕ ಸ್ಟಾರ್ಟ್ ಆಫ್ ಎಲಿವೆಟ್ ಅನುದಾನದಿಂದ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಜೆಎಸ್ಎಸ್ ಎಎಚ್‌ಇಆರ್) ಸ್ಕೂಲ್ ಆಫ್…

## [ತೋಟಗಾರಿಕೆ ಬೆಳೆಗಳ ರೋಗ ನಿಯಂತ್ರಣ : ಔಷಧಿ ಖರೀದಿಗೆ ಸಹಾಯಧನ](https://newskarkala.com/2026/08/22/hotriculture-subsidy/)

_2026-08-22 · Newskarkala Desk · News Karkala_

ಕಾರ್ಕಳ : ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ರೈತರು ತಮ್ಮ ತೋಟಗಾರಿಕೆ ಬೆಳೆಗಳಿಗೆ ಬಳಸುವ ಸಲುವಾಗಿ ಖರೀದಿಸಿರುವ ವಿವಿಧ ಕೀಟನಾಶಕಗಳು, ರೋಗನಾಶಕಗಳು, ಜೈವಿಕ ಗೊಬ್ಬರ ಹಾಗೂ ಜೈವಿಕ ಪೀಡೆ ನಾಶಕಗಳಿಗೆ ಶೇ. 30ರ ದರದಲ್ಲಿ ಪ್ರತಿ ಎಕರೆಗೆ ಗರಿಷ್ಠ 600 ರೂ.ಯಂತೆ ಸಹಾಯಧನ ಲಭ್ಯವಿದ್ದು, ಒಬ್ಬ ರೈತರಿಗೆ ಗರಿಷ್ಠ 3000 ರೂ.ವರೆಗೆ ಸಹಾಯಧನ ನೀಡಿಕೆಗೆ ಅವಕಾಶವಿರುತ್ತದೆ. ಅಡಿಕೆ ಕೊಳೆರೋಗ, ಎಲೆಚುಕ್ಕೆ ರೋಗ, ಕಾಳುಮೆಣಸು ಸೊರಗು ರೋಗ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬರುವ ರೋಗ ಮತ್ತು…

## [ಬೆಳ್ತಂಗಡಿ: ಬಾಲಕ ಸುಮಂತ್ ಸಂಶಯಾಸ್ಪದ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬೆಂಗಳೂರಿನಲ್ಲಿ ಕುಟುಂಬಸ್ಥರಿಗೆ ಮಂಪರು ಪರೀಕ್ಷೆ, ಬ್ರೈನ್ ಮ್ಯಾಪಿಂಗ್!](https://themangaloremirror.in/belthangady-sumanth-suspicious-death-case-fsl-brain-mapping-bengaluru/)

_2026-08-22 · guru · themangaloremirror.in_

ಬೆಳ್ತಂಗಡಿ ಅಗಸ್ಟ್ 22: ಗೇರುಕಟ್ಟೆ ಸಮೀಪದ ಸಂಭೋಳ್ಯದ 15 ವರ್ಷದ ಹೈಸ್ಕೂಲ್ ವಿದ್ಯಾರ್ಥಿ ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆಯನ್ನು ಭೇದಿಸಲು ಬೆಳ್ತಂಗಡಿ ಪೊಲೀಸರು ವೈಜ್ಞಾನಿಕ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಮಂಪರು ಪರೀಕ್ಷೆ ಹಾಗೂ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಿಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದ ಪೊಲೀಸ್ ತಂಡವು ಮೃತ…

## [ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಕೃತ್ಯಕ್ಕೆ ಬೈಕ್ ಒದಗಿಸಿದ ಆರೋಪಿ ಬಂಧನ](https://newskarkala.com/2026/08/22/david-shootout-case-updates/)

_2026-08-22 · Newskarkala Desk · News Karkala_

ಉಡುಪಿ : ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣದಲ್ಲಿ ಬೈಕ್ ಒದಗಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೇರಿದೆ. ಬೈಂದೂರು ಬಾಳಿಹಿತ್ಲು ನಿವಾಸಿ ಲೋಕೇಶ್ ತೇಜ ಕೊಠಾರಿ(42) ಬಂಧಿತ ಆರೋಪಿ. ಈತ ಈ ಮೊದಲು ಮುಂಬಯಿಯಲ್ಲಿ ಕೆಲಸ ಮಾಡಿ ಕೊಂಡಿದ್ದು, ಆಗ ಅಲ್ಲಿ ಈ ಪ್ರಕರಣದ ಆರೋಪಿ ಕಿಶೋರ್ ರಾಮ ಪೂಜಾರಿ ಪರಿಚಯವಾಗಿ ಸ್ನೇಹಿತನಾಗಿದ್ದನು.ಲೋಕೇಶ್ ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ಮೋಲ್…

## [ಅಕ್ರಮವಾಗಿ ದನ ಸಾಗಾಟ &#8211; ಓರ್ವ ಪೊಲೀಸರ ವಶಕ್ಕೆ](https://newskarkala.com/2026/08/22/crime-belman/)

_2026-08-22 · Newskarkala Desk · News Karkala_

ಕಾರ್ಕಳ : ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನವನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯದಲ್ಲಿ ನಡೆದಿದೆ. ಏಳಿಂಜೆ ಗ್ರಾಮದ ಜಯ ಮೂಲ್ಯ ಬಂಧಿತ ಆರೋಪಿ. ಕೆಎ 19 ಎಎಫ್ 2512 ನಂಬರ್‌ನ ಪಿಕಪ್ ವಾಹನದಲ್ಲಿ ರೋಶ್ನಿ ಎಂಬವರಿಂದ ಖರೀದಿಸಿದ ದನಗಳನ್ನು ಸಾಗಿಸುತ್ತಿದ್ದಾಗ ಸಂಕಲಕರಿಯ ರಾಜ್ಯ ಹೆದ್ದಾರಿಯಲ್ಲಿ ತಡೆದು…

## [ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ದಾಖಲೆ ಸುಟ್ಟ ವಿಚಾರಕ್ಕೆ ಗಲಾಟೆ, ಪರಸ್ಪರ ಹಲ್ಲೆ: ಕೌಂಟರ್ ಕೇಸ್ ದಾಖಲು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧವೂ ಪ್ರಕರಣ!](https://themangaloremirror.in/puttur-darbe-digital-seva-kendra-altercation-over-burnt-document/)

_2026-08-21 · guru · themangaloremirror.in_

ಪುತ್ತೂರು ಅಗಸ್ಟ್ 21: ದಾಖಲೆಪತ್ರ ಲ್ಯಾಮಿನೇಷನ್ ಮಾಡುವಾಗ ತಾಂತ್ರಿಕ ದೋಷದಿಂದ ಸುಟ್ಟುಹೋದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಅಂಗಡಿ ಮಾಲೀಕರ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ಪುತ್ತೂರಿನ ದರ್ಭೆಯಲ್ಲಿ ಆಗಸ್ಟ್ 21ರ ಮಧ್ಯಾಹ್ನ ಸಂಭವಿಸಿದೆ. ಸುಳ್ಯ ಮಂಡೆಕೋಲು ನಿವಾಸಿಗಳಾದ ಮುಬಾಶಿರ, ಫಾತೀಮಾ ಹಾಗೂ ಮುಬಾಶಿರ್ ಎಂಬುವವರು ಪುತ್ತೂರಿನ ದರ್ಭೆಯಲ್ಲಿರುವ ಅಂಜನಾ ಪೈ ಎಂಬುವರಿಗೆ ಸೇರಿದ “Dream destination digital seva Kendra” ಅಂಗಡಿಗೆ ತೆರಳಿ ಕೆಲವು…

## [ಕರಾವಳಿ ಜನರ ದಶಕಗಳ ಕನಸು ನನಸು &#8211; ಸಂಸದ ಬ್ರಿಜೇಶ್ ಚೌಟ ಶ್ರಮಕ್ಕೆ ಫಲ -ಪಾಲ್ಗಾಟ್ ನಿಂದ ಮುಕ್ತಿ ಪಡೆದ ಮಂಗಳೂರು](https://themangaloremirror.in/mangaluru-railway-network-merged-with-swr-mysuru-division-railway-ministry-approval/)

_2026-08-21 · guru · themangaloremirror.in_

ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಈ ಐತಿಹಾಸಿಕ ತೀರ್ಮಾನದ ಬಗ್ಗೆ…

## [ಕರಾವಳಿಗರ ದಶಕಗಳ ಬೇಡಿಕೆ ಈಡೇರಿಕೆ: ಕೊನೆಗೂ ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವಿಲೀನ!](https://themangaloremirror.in/mangaluru-railway-region-merged-with-swr-mysuru-division/)

_2026-08-21 · guru · themangaloremirror.in_

ಮಂಗಳೂರು ಅಗಸ್ಟ್ 21: ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಪ್ರಯಾಣಿಕರ ದಶಕಗಳ ಬಾಕಿ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ತಲುಪಿದೆ. ಪ್ರಸ್ತುತ ದಕ್ಷಿಣ ರೈಲ್ವೆ ವಲಯದ (Southern Railway) ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ (SWR) ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಾಹಿತಿ ನೀಡಿದ್ದಾರೆ. ಹೊಸ ನಿರ್ಧಾರದಂತೆ…

## [ಮಹಾರಾಷ್ಟ್ರ: ಪ್ರಪಾತಕ್ಕೆ ಹಾರಿದ ಮಗನನ್ನು ರಕ್ಷಿಸಲು ಹೋಗಿ ತಾಯಿ-ತಂದೆಯೂ ಬಲಿ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು!](https://themangaloremirror.in/chhatrapati-sambhajinagar-khawadya-mountain-family-tragedy-three-dead/)

_2026-08-21 · guru · themangaloremirror.in_

ಛತ್ರಪತಿ ಸಂಭಾಜಿನಗರ ಅಗಸ್ಟ್ 21: : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಗನನ್ನು ಕೊನೆ ಕ್ಷಣದಲ್ಲಿ ರಕ್ಷಿಸಲು ಹೋಗಿ ತಂದೆ-ತಾಯಿ ಇಬ್ಬರೂ ಆಳವಾದ ಕ್ವಾರಿಗೆ ಬಿದ್ದು, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಧುಲೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ ಪರ್ವತ ಪ್ರದೇಶದಲ್ಲಿ ನಡೆದಿದೆ. ಇಂದು (ಆಗಸ್ಟ್ 21) ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೃತರನ್ನು ಮುರಳೀಧರ್ ದಾಮೋಧರ್ ಚಂದಗುಡೆ (48), ಅವರ ಪತ್ನಿ ಸಂಗೀತಾ…

## [ಕುಂದಾಪುರ: ಸುದ್ಧಿ ಪ್ರಕಟಿಸಿದ ದ್ವೇಷಕ್ಕೆ &#8216;ಕನ್ನಡ ಪ್ರಭ&#8217; ಪತ್ರಕರ್ತನ ಮೇಲೆ ವೈದ್ಯನಿಂದ ಹಲ್ಲೆ; ದೂರು ದಾಖಲು](https://themangaloremirror.in/kundapura-doctor-assaults-kannada-prabha-journalist-srikanth-hemmadi/)

_2026-08-21 · guru · themangaloremirror.in_

ಕುಂದಾಪುರ ಅಗಸ್ಟ್ 21: ಸುದ್ದಿ ಪ್ರಕಟಿಸಿದ ವರದಿಗಾರನ ವಿರುದ್ಧ ದ್ವೇಷ ಸಾಧಿಸಿ ಸರಕಾರಿ ಆಸ್ಪತ್ರೆಯ ವೈದ್ಯ ರೊಬ್ಬರು ಸಾರ್ವಜನಿಕವಾಗಿ ಪತ್ರಕರ್ತನ ಮೇಲೆ ಏಕಾಏಕಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ‘ಕನ್ನಡ ಪ್ರಭ’ ಪತ್ರಿಕೆಯ ಕುಂದಾಪುರ ಹಾಗೂ ಬೈಂದೂರು ತಾಲೂಕು ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಹಲ್ಲೆಗೊಳಗಾದ ಪತ್ರಕರ್ತರಾಗಿದ್ದು, ಹಲ್ಲೆ ನಡೆಸಿದ ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಕುಂದಾಪುರ…

## [ವೇಣೂರು: ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ &#8211; ಆರೋಪಿ ಅರೆಸ್ಟ್](https://themangaloremirror.in/venoor-belthangady-pocso-case-auto-driver-jamaluddin-arrested-for-assault/)

_2026-08-21 · guru · themangaloremirror.in_

ಬೆಳ್ತಂಗಡಿ ಅಗಸ್ಟ್ 21: ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದಲ್ಲಿ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ವೇಣೂರು ನಿವಾಸಿಯಾಗಿರುವ ಆರೋಪಿ ಜಮಾಲುದ್ದೀನ್ ತನ್ನ ಆಟೋ ರಿಕ್ಷಾದಲ್ಲಿ 14 ವರ್ಷದ ಬಾಲಕಿಯನ್ನು ಕಳೆದ ಕೆಲವು ತಿಂಗಳುಗಳಿಂದ ಶಾಲೆಗೆ ಕರೆದೊಯ್ಯುತ್ತಿದ್ದನು. ಈ ವೇಳೆ ಆಕೆಯೊಂದಿಗೆ ಅನುಚಿತವಾಗಿ…

## [ಸುಳ್ಯ :ಎನ್ನೆoಪಿಯು ವಿದ್ಯಾರ್ಥಿಗಳು ರನ್ನರ್ಸ್.](https://newsnotout.com/2026/08/21/sullia-nmc-student-achievement/)

_2026-08-21 · Team Newsnotout · Newsnotout_

ನ್ಯೂಸ್ ನಾಟೌಟ್ : ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ವತಿಯಿಂದ ನಡೆದ ಪಿಯು ವಿಭಾಗದ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜು ವಿದ್ಯಾರ್ಥಿಗಳು ರನ್ನರ್ಸ್ ಆಗಿ ಹೊರ ಹೊಮ್ಮಿದ್ದಾರೆ.ಸೆಮಿ ಕ್ಲಾಸಿಕಲ್ ನೃತ್ಯ (ಪ್ರ )ಸ್ಪಿಲಿಟ್ ಸ್ಕ್ರೀನ್ (ಪ್ರ )ಮಾಡ್ ಆಡ್ (ದ್ವಿ )ಬಹುಮಾನ ಟ್ರೋಫಿ, ನಗದು ಒಳಗೊಂಡಿದೆ.ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಆಡಳಿತಾಧಿಕಾರಿ, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ. The post ಸುಳ್ಯ :ಎನ್ನೆoಪಿಯು…

## [ಪದ್ಮಶ್ರೀ ಪ್ರಶಸ್ತಿ ವಿಜೇತ, ಖ್ಯಾತ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ](https://newskarkala.com/2026/08/21/janaki-no-more/)

_2026-08-21 · Newskarkala Desk · News Karkala_

ದೆಹಲಿ : ಭಾರತೀಯ ಚಿತ್ರರಂಗದ ಹಿರಿಯ ನಟಿ ಸಾಹುಕಾರ್ ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದ ಆ. 21ರಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಆಳ್ವಾರ್‌ ಪೇಟೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ಮಧ್ಯಾಹ್ನ 1.59ಕ್ಕೆ ಕೊನೆಯುಸಿರೆಳೆದಿದ್ದಾರೆ. 1931ರ ಡಿಸೆಂಬರ್ 12ರಂದು ಜನಿಸಿದ…

## [ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ](https://newskarkala.com/2026/08/21/ramesh-b/)

_2026-08-21 · Newskarkala Desk · News Karkala_

ಕಾರ್ಕಳ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ)ಯ ಕಾರ್ಕಳ ಶಾಖೆಯ ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ ಆಯ್ಕೆಯಾದ್ದಾರೆ.ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಉಡುಪಿ ವಿಭಾಗೀಯ ಸಂಚಾಲಕ ಶ್ಯಾಮ್‌ರಾಜ್ ಭಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. The post ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ appeared first on News Karkala .

## [ವರದಿ ಪ್ರಕಟಿಸಿದ ಬೆನ್ನಲ್ಲೇ ಪತ್ರಕರ್ತನ ಮೇಲೆ ಸರಕಾರಿ ವೈದ್ಯನಿಂದ ಹಲ್ಲೆ](https://newskarkala.com/2026/08/21/reporter-shrikanth-hemmadi-attacked-by-dr-mahendra-kumar-shetty/)

_2026-08-21 · Newskarkala Desk · News Karkala_

ಕುಂದಾಪುರ : ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಭ್ರಷ್ಟಾಚಾರದ ಕುರಿತು ಸರಣಿ ವರದಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ, ಕನ್ನಡಪ್ರಭ ದಿನಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಸರ್ಕಾರಿ ವೈದ್ಯರೊಬ್ಬರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕುಂದಾಪುರದ ಖಾಸಗಿ ಹೊಟೇಲಿನಲ್ಲಿ ತನ್ನ ಪತ್ನಿ ಹಾಗು ಗೆಳಯರೊಂದಿಗೆ ಕುಳಿತಿದ್ದ ಶ್ರೀಕಾಂತ್ ಹೆಮ್ಮಾಡಿಯವರ ಮೇಲೆ ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಶೆಟ್ಟಿ ಏಕಾಏಕಿ ಹಲ್ಲೆ…

## [ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರ ಬಳಿ ಚಿನ್ನದ ಪುಡಿ ಪತ್ತೆ](https://themangaloremirror.in/gold-powder-found-with-passengers-arriving-in-bengaluru-from-bangkok/)

_2026-08-21 · guru · themangaloremirror.in_

ಚಿಕ್ಕಬಳ್ಳಾಪುರ, ಆಗಸ್ಟ್ 21: ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರ ಬಳಿ ಒಟ್ಟು 260 ಗ್ರಾಂ ಚಿನ್ನದ ಪುಡಿ ಪತ್ತೆಯಾಗಿದ್ದು, CISF ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕೆಐಎ ಟರ್ಮಿನಲ್-1ರಲ್ಲಿ CISF ಸಿಬ್ಬಂದಿ ಪ್ರಯಾಣಿಕರನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಚಿನ್ನದ ಪುಡಿ ಪತ್ತೆಯಾಗಿದೆ. ಲಕ್ಷ್ಮಣ ಹಾಗೂ ರಾಘವೇಂದ್ರ ಎಂಬ ಇಬ್ಬರು ಪ್ರಯಾಣಿಕರು ಪ್ಯಾಂಟ್‌ನ ಸೊಂಟದ ಭಾಗದಲ್ಲಿ ವಿಶೇಷವಾಗಿ…

## [ದಕ್ಷಿಣಭಾರತ ಚಿತ್ರರಂಗದ ಹಿರಿಯ ನಟಿ ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ ಇನ್ನಿಲ್ಲ](https://themangaloremirror.in/legendary-actress-sowcar-janaki-passes-away-at-94-in-chennai/)

_2026-08-21 · guru · themangaloremirror.in_

ಚೆನ್ನೈ ಅಗಸ್ಟ್ 21: ದಕ್ಷಿಣ ಭಾರತೀಯ ಚಿತ್ರರಂಗದ ದಂತಕಥೆ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (94) ಅವರು ಅನಾರೋಗ್ಯದ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. 1931 ಡಿಸೆಂಬರ್ 12 ರಂದು ಜನಿಸಿದ ಜಾನಕಿ ಅವರು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ತಮಿಳು, ತೆಲುಗು,…

## [ಇಂತಹ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ&#8217;: ವೃತ್ತಕ್ಕೆ ಎಷ್ಟು ಸೈಡ್ಸ್ ಇರುತ್ತದೆ ಎಂದು ಕೇಳಿ ಟ್ರೋಲ್‌ಗೆ ಗುರಿಯಾಗಿದ್ದ ವಿನಯ್ ಗೌಡ!](https://newsnotout.com/2026/08/21/bigg-boss-kannada-former-contestant-vinay-gowda-defends-circle-has-two-sides-question-hits-back-at-trolls/)

_2026-08-21 · Team Newsnotout · Newsnotout_

ನ್ಯೂಸ್ ನಾಟೌಟ್ : ಇತ್ತೀಚೆಗೆ ನಡೆದ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಸಂಚಿಕೆಯಲ್ಲಿ ತಾವು ಕೇಳಿದ್ದ ಪ್ರಶ್ನೆಯೊಂದಕ್ಕೆ ಟ್ರೋಲ್‌ಗಳಿಗೆ ಗುರಿಯಾಗಿದ್ದ ಬಿಗ್‌ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ಇದೀಗ ಖಡಕ್ ತಿರುಗೇಟು ನೀಡಿದ್ದು, ಇಂತಹ ಯಾವುದೇ ವಿಚಾರಗಳಿಗೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಆಡಿಷನ್‌ಗೆಂದು ಆಗಮಿಸಿದ್ದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯೊಬ್ಬರಿಗೆ ವಿನಯ್ ಗೌಡ ಅವರು ‘ವೃತ್ತವೊಂದಕ್ಕೆ ಎಷ್ಟು ಸೈಡ್ಸ್ ಇರುತ್ತದೆ?’ ಎಂದು ಪ್ರಶ್ನಿಸಿದ್ದರು. ಅದಕ್ಕೆ ಆ ಯುವಕ…

## [ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006](https://newskarkala.com/2026/08/21/kanunu-kanaja-aug-21-2/)

_2026-08-21 · Newskarkala Desk · News Karkala_

ಲಾಭದ ಆಸೆಗಾಗಿ ಆಹಾರ ಪದಾರ್ಥಗಳಲ್ಲಿ ಕಳಪೆ ಗುಣಮಟ್ಟದ, ಹಾನಿಕರ ಅಥವಾ ನಿಷೇಧಿತ ವಸ್ತುಗಳನ್ನು ಬೆರೆಸಿ ಅದರ ಮೂಲ ಗುಣಮಟ್ಟವನ್ನು ಕಡಿಮೆ ಮಾಡುವುದನ್ನು ಆಹಾರ ಕಲಬೆರಕೆ ಎನ್ನಲಾಗುತ್ತದೆ. ನಮ್ಮ ಭಾರತ ದೇಶದಲ್ಲಿ ಆಹಾರ ಸುರಕ್ಷತೆಯನ್ನು ಕಾಪಾಡುವುದಕ್ಕಾಗಿ ಹಳೆಯದಾದ ‘ಆಹಾರ ಕಲಬೆರಕೆ ನಿಯಂತ್ರಣ ಕಾಯ್ದೆ 1954 ಎಂಬ ಕಾನೂನು ಜ್ಯಾರಿಯಲ್ಲಿತ್ತು. ಆಹಾರ ಪದಾರ್ಥಗಳ ಕಲಬೆರಕೆಯ ದುಷ್ಟತನವು ನಮ್ಮ ದೇಶಾದ್ಯಂತ ವ್ಯಾಪಕವಾಗಿ ಮತ್ತು ನಿರಂತರವಾಗಿ ಬೆಳೆದ ಕಾರಣ ಮತ್ತು ಈ ಕಾನೂನಿನಲ್ಲಿ ಕಂಡು ಬರುತ್ತಿದ್ದ…

## [ದಸ್ಕತ್ ಸಿನೆಮಾ ನಿರ್ದೇಶಕರಿಂದ ಹೊಸ ಚಿತ್ರ ‘ಅಜ್ಜಿಕಥೆ’!](https://newskarkala.com/2026/08/21/ajjikathe-film/)

_2026-08-21 · Newskarkala Desk · News Karkala_

ದುಬೈನಲ್ಲಿ ಶೀರ್ಷಿಕೆ ಅನಾವರಣ ಕಾರ್ಕಳ : ಲವ್ ಕಾಕ್‌ಟೈಲ್, ಅಪ್ಪೆ ಟೀಚರ್, ಮಾಲ್ಗುಡಿ ಡೇಸ್, ಹೌದ್ದೋ ಹುಲಿಯ ಸೇರಿದಂತೆ ವಿಭಿನ್ನ ಕಥೆಗಳು ಹಾಗೂ ಮನರಂಜನೆಯ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡಿರುವ ಸ್ವಯಂ‌ಪ್ರಭ ಎಂಟರ್ಟೈನ್ಮೆಂಟ್ & ಪ್ರೋಡಕ್ಷನ್ ಸಂಸ್ಥೆಯಿಂದ ಇದೀಗ ಮತ್ತೊಂದು ಹೊಸ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ವಿಭಿನ್ನ ಕಥಾಹಂದರ ಹಾಗೂ ಹಾಸ್ಯ ಮನರಂಜನೆಯೊಂದಿಗೆ ಮೂಡಿಬರುತ್ತಿರುವ ಹೊಸ ಚಿತ್ರವೇ ‘ಅಜ್ಜಿಕಥೆ’. ಆ. 20ರಂದು ದುಬೈನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ‘ಅಜ್ಜಿಕಥೆ’…

